ಬಿ.ಕೆ ಹರಿಪ್ರಸಾದ್ ಈ ರೀತಿ ಮಾತಾಡೋದು ಸರಿಯಲ್ಲ: ದಿನೇಶ್ ಗುಂಡೂರಾವ್

By
1 Min Read

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕಾಂಗ್ರೆಸ್ (Congress) ಮುಖಂಡ ಬಿ.ಕೆ ಹರಿಪ್ರಸಾದ್ (B.K Hariprasad) ವಾಗ್ದಾಳಿ ನಡೆಸಿರುವುದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಅನ್ನೋದು ನನಗೆ ಗೊತ್ತಿಲ್ಲ. ಆದರೆ ಓರ್ವ ಪ್ರಮುಖ ರಾಜಕಾರಣಿ ಆ ಥರ ಮಾತನಾಡೋದು ಸರಿಯಲ್ಲ. ಅವರು ಯಾರ ಬಗ್ಗೆ, ಯಾಕೆ ಟೀಕೆ ಮಾಡ್ತಾರೆ ಅನ್ನೋದೇ ಅರ್ಥವಾಗ್ತಿಲ್ಲ ಎಂದರು. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವ್ಯಾನ್‌ಗೆ ಲಾರಿ ಡಿಕ್ಕಿ: 7 ಮಹಿಳೆಯರ ದುರ್ಮರಣ

ಹೈಕಮಾಂಡ್ ಈಗಾಗ್ಲೇ ಅವರಿಗೆ ಏನೂ ಮಾತನಾಡಬೇಡಿ ಎಂದು ಹೇಳಿದೆ. ಆದರೂ ಅವರು ಈ ರೀತಿ ಮಾತನಾಡ್ತಿರೋದು ಸರಿಯಲ್ಲ. ನಮೆಗೆಲ್ಲರಿಗೂ ಪಕ್ಷದಲ್ಲಿ ಸ್ಥಾನ ಸಿಗುತ್ತೆ ಮತ್ತು ಹೋಗುತ್ತೆ ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು. ಇದರಿಂದ ಯಾರಿಗೂ ತೊಂದರೆ ಆಗಿಲ್ಲ, ಅವರಿಗೇ ಡ್ಯಾಮೇಜ್ ಆಗ್ತಿದೆ. ನಮ್ಮ ಪಕ್ಷ ಎಂದೂ ಬೇಧ-ಭಾವ ಮಾಡಿಲ್ಲ ಎಂದಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್