ಹೆಂಡ್ತಿ ಕಾಟ- ಅಣ್ಣನಿಗೆ ಆಡಿಯೋ ಮೆಸೇಜ್ ಮಾಡಿ Metro ಎಂಜಿನಿಯರ್ ಸೂಸೈಡ್

Public TV
1 Min Read

ತುಮಕೂರು: ಹೆಂಡತಿ ಕಾಟದಿಂದ ಬೇಸತ್ತು ಎಂಜಿನಿಯರ್ ಒಬ್ಬರು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

ಮೃತನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರು ಮೆಟ್ರೊದಲ್ಲಿ ಎಂಜಿನಿಯರ್ (Metro Engineer) ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ 9 ವರ್ಷಗಳ ಹಿಂದೆ ಮಂಜುನಾಥ್ ತುರುವೆಕೆರೆ ಮೂಲದ ಪ್ರಿಯಾಂಕಾ ಯಾನೆ ಪವಿತ್ರಾಳನ್ನ ಮದುವೆಯಾಗಿದ್ದರು. ಮದುವೆ ನಂತರ ಮಂಜುನಾಥ್‍ಗೆ ಪತ್ನಿ ಪವಿತ್ರಾ ಮಾನಸಿಕ ಕಿರುಕುಳ ನೀಡಿದ್ದಳು. ಇದರಿಂದ ಮನನೊಂದು ಮಂಜುನಾಥ್ ಕೆಬಿ ಕ್ರಾಸ್ ನ ಕುದ್ರುಪಾಳ್ಯದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಯೋ ಮುನ್ನ ಮುಂಜುನಾಥ್ ತನ್ನ ಅಣ್ಣನಿಗೆ ಆಡಿಯೋ ಮೆಸೇಜ್ ಮಾಡಿದ್ದಾರೆ. ಅದರಲ್ಲಿ ನನಗೆ ಅವಳ ಜೊತೆ ಜಿವನ ಮಾಡೋಕೆ ಆಗ್ತಾ ಇಲ್ಲ. ಆ ಮನೆಹಾಳಿಯಿಂದ ನಾನು ಸಾಯ್ತಾ ಇದ್ದೀನಿ. ನನ್ನ ಮಗಳನ್ನ ಚೆನ್ನಾಗಿ ನೋಡಿಕೊಳ್ಳೋಕೆ ಹೇಳು. ಯಾರು ಬೇಜಾರ್ ಮಾಡ್ಕೊಬೇಡಿ ಕಣ್ರೋ ಪ್ಲೀಸ್. ನಾವು ಕೂಲಿ ಮಾಡ್ಕೊಂಡ್ ಜೀವನ ಮಾಡುವವರಂತೆ. ಹಳ್ಳಿಗೆ ಬರಲ್ಲ ಅಂದೊಳನ್ನ ಯಾಕಪ್ಪ ನನಗೆ ಮದುವೆ ಮಾಡಿದ್ರು. ಮೈಸೂರಲ್ಲಿ ಯಾರನ್ನೋ ನೋಡಿದ್ಲಂತೆ, ಅವ್ರನ್ನೇ ಆಗ್ಬೆಕಿತ್ತಂತೆ. ಪೊಲೀಸ್ ಗೆ ಹೇಳ್ಬೇಡಿ,ಪೋಸ್ಟ್ ಮಾರ್ಟಮ್ ಮಾಡ್ಬಿಡ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿನ್ ಹೆಂಡ್ತಿ ನಂಬರ್ ಕೊಡು ಎಂದವನ ಮೇಲೆ ರೌಡಿಯಿಂದ ಹಲ್ಲೆ – ಒದೆ ತಿಂದವನ ಕಡೆಯವರಿಂದ ಮನೆ ಮುರಿದು ದಾಂಧಲೆ

ಸದ್ಯ ಪತ್ನಿ ಮತ್ತು ತಮ್ಮ ರಾಕೇಶ್ ಸೇರಿ ಇಡೀ ಕುಟುಂಬದ ಮೇಲೆ ತಿಪಟೂರು ಕಿಬ್ಬಾನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್