ಹೈದರಾಬಾದ್‍ನಲ್ಲಿ ಹಾಲಶ್ರೀ ಅಡಗಿರುವ ಶಂಕೆ – ಬಂಧನಕ್ಕೆ ತೆರಳಿದ ಸಿಸಿಬಿ ಟೀಂ

By
1 Min Read

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ (Chaitra Kundapur) ಗ್ಯಾಂಗ್‍ನ ತಲೆಮರೆಸಿಕೊಂಡಿರುವ ಆರೋಪಿ ಅಭಿನವ ಹಾಲಶ್ರೀ (Halashree) ಬಂಧನಕ್ಕೆ ಸಿಸಿಬಿ ತೀವ್ರ ಹುಡುಕಾಟ ಆರಂಭಿಸಿದೆ. ಆರೋಪಿ ಹೈದರಾಬಾದ್‍ನಲ್ಲಿ (Hyderabad) ಅಡಗಿರುವ ಶಂಕೆ ಇದ್ದು ಬಂಧನಕ್ಕೆ ಸಿಸಿಬಿ (CCB) ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ.

ತಲೆಮರೆಸಿಕೊಂಡಿರುವ ಹಾಲಶ್ರೀ ಪ್ರಕರಣದ ಮೂರನೇ ಆರೋಪಿ ಆಗಿದ್ದು, ಚೈತ್ರಾ ಬಂಧನದ ಬಳಿಕ ಯಾವುದೇ ಸುಳಿವಿಲ್ಲದಂತೆ ನಾಪತ್ತೆಯಾಗಿದ್ದರು. ಪ್ರಕರಣದಲ್ಲಿ ಸ್ವಾಮೀಜಿಯ ಕಾರು ಚಾಲಕ ನಿಂಗರಾಜ್‍ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಹಾಲಶ್ರೀ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಆರೋಪಿ ಅಡಗಿರುವ ಸುಳಿವಿಗಾಗಿ ಚಾಲಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!

ಇನ್ನೂ ಸ್ವಾಮೀಜಿ ಮೈಸೂರಿನಲ್ಲಿ ಕಾರು ಬಿಟ್ಟು ಬಳಿಕ ಅಲ್ಲಿಂದ ಪರಾರಿಯಾಗಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಕಾರಿನ ನಂಬರ್ ಪ್ಲೇಟ್ ತೆಗೆದು ಪ್ರಯಾಣಿಸಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ ಸ್ವಾಮೀಜಿಗಳ ಬಳಿ ನಾಲ್ಕು ಸಿಮ್‍ಗಳಿವೆ ಎನ್ನಲಾಗಿದೆ.

ಸ್ವಾಮೀಜಿ ಆಗಾಗ ಸ್ಥಳ ಬದಲಾಯಿಸುತ್ತಿದ್ದು ಬಂಧನಕ್ಕೆ ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಸಂಘಟನೆಯಲ್ಲಿ ಹೆಂಡತಿ ಬ್ಯುಸಿ – ಬೇಸತ್ತ ಪತಿಯಿಂದ ಪತ್ನಿ, ಅತ್ತೆಯ ಭೀಕರ ಹತ್ಯೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್