ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿ

Public TV
1 Min Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹೇಳಿದಂತೆ ಕಾಂತರಾಜು ವರದಿಯನ್ನು (Kantharaju Report) ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ಈಗಾಗಲೇ ವರದಿ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರು ಹೇಳಿದ ಮೇಲೆ ನಾನು ಹೇಳುವುದು ಏನು ಇಲ್ಲ. ಇಲಾಖೆ ಸಚಿವನಾಗಿ ವರದಿ ಸ್ವೀಕಾರ ಮಾಡುತ್ತೇನೆ ಎಂದರು.

 

ಕಾಂತರಾಜು ವರದಿಯನ್ನು ಸ್ವೀಕಾರ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಪತ್ರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ‌ ಅವರು, ಇಲ್ಲಿವರೆಗೂ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಅವರು ಬರೆದಿದ್ದರೂ ನನಗೆ ಅ ಪತ್ರ ತಲುಪಿಲ್ಲ. ಪತ್ರ ಬಂದ ಮೇಲೆ ಸಿಎಂ, ಡಿಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡುತ್ತೇನೆ. ಅಧಿಕೃತವಾಗಿ ಪತ್ರ ನನಗೆ ಬಂದಿಲ್ಲ.ಪತ್ರ ಬಂದ ಮೇಲೆ ಡಿಸಿಎಂ ಜೊತೆಗೂ ಮಾತನಾಡಿ ಅವರ ಬಳಿ ಮಾಹಿತಿ ಪಡೆಯುತ್ತೇನೆ ಎಂದರು.

ಕಾಂತರಾಜು ವರದಿ ಇನ್ನು‌ ಸ್ವೀಕಾರ ಆಗಿಲ್ಲ. ಅದರಲ್ಲಿ ಏನಿದೆಯೋ ನನಗೂ‌ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ಜನಗಣತಿ ಮಾಡಿತ್ತು. ಆರ್ಥಿಕವಾಗಿ,ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮಾಹಿತಿ ಅರಿಯಲು ಸಮೀಕ್ಷೆ ಮಾಡಲಾಗಿತ್ತು. ಸಿದ್ದರಾಮಯ್ಯ ಅವರು ಈಗಾಗಲೇ ವರದಿ ಸ್ವೀಕಾರ ಮಾಡುತ್ತೇವೆ ಅಂತ ಹೇಳಿದ್ದಾರೆ. ಅದನ್ನು ಸ್ವೀಕಾರ ಮಾಡಿ ಅಧ್ಯಯನ ಮಾಡಿದ ಮೇಲೆ ಅದರ ವಾಸ್ತವ ತಿಳಿಯುತ್ತದೆ. ನಾನು ಇಲಾಖೆ ಮಂತ್ರಿ ಮಾತ್ರ. ಅಂತಿಮವಾಗಿ ಸಿಎಂ, ಡಿಸಿಎಂ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಅಂದು ಗರ್ಭಿಣಿ, ಇದೀಗ ಮದುವೆ: ಸಾಯಿ ಪಲ್ಲವಿ ಫೋಟೋ ವೈರಲ್ 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್