ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ – ಗೋವಿಂದ ಬಾಬು ವಿರುದ್ಧವೇ ಇಡಿಗೆ ದೂರು

By
1 Min Read

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ (BJP MLA Ticket Scam) ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ (Govind Babu Poojari) ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ED) ದೂರು ದಾಖಲಾಗಿದೆ.

5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ.  ಇದನ್ನೂ ಓದಿ: ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರ

ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ನಟರಾಜ ಶರ್ಮಾ, ಗೋವಿಂದ ಪೂಜಾರಿ ಅವರು ನೀಡಿರುವ ದೂರಿನಲ್ಲಿ ನಗದು ರೂಪದಲ್ಲಿ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಟಿಕೆಟ್‌ಗೆ 5 ಕೋಟಿ ರೂ. ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆ. ಮುಂಬೈನಲ್ಲಿ (Mumbai) ವ್ಯವಹಾರ ಮಾಡಿಕೊಂಡಿದ್ದ ಅವರಿಗೆ 5 ಕೋಟಿ ರೂ. ಹಣವನ್ನು ನಗದು ರೂಪದಲ್ಲಿ ನೀಡಬಾರದು ಎನ್ನುವುದು ಅವರಿಗೆ ತಿಳಿದಿರಬೇಕಿತ್ತು. ಇದು ಹವಾಲಾ ಹಣ ಎಂಬ ದೃಷ್ಟಿಯಿಂದ ದೂರು ನೀಡಿದ್ದೇನೆ ಎಂದು ತಿಳಿಸಿದರು.

ಈ ವಂಚನೆ ಪ್ರಕರಣದಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಾಲವಾಗಿಯೇ ಹಣ ಪಡೆದಿದ್ದರೂ ಸಾಲ ಪಡೆದ ಉದ್ದೇಶವೇ ಬೇರೆಯಾಗಿದೆ. ನಗದು ರೂಪದಲ್ಲಿ ಇಷ್ಟೊಂದು ವ್ಯವಹಾರ ನಡೆಸಿದ್ದು ಹೇಗೆ? ಇಡಿ ಈ ವಿಚಾರವಾಗಿ ತನಿಖೆ ಮಾಡಬೇಕೆಂದು ಕೋರಿ ದೂರು ನೀಡಿದ್ದೇನೆ ಎಂದು ತಿಳಿಸಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್