ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸಾವು

By
1 Min Read

ಬೆಂಗಳೂರು: ಈ ಹಿಂದೆ ಧರ್ಮಸ್ಥಳದಲ್ಲಿ (Dharmasthala) ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯ ರಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿ ಯನ್ನು ವಾಪಸ್ ಕಳುಹಿಸಿದ್ರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಇತ್ತ ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೈಂಟ್ ಕೂಡ ದಾಖಲಾಗಿತ್ತು. ಸದ್ಯ ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್