ಕರ್ನಾಟಕದವರು ಸತ್ತಿಲ್ಲ, ಬದುಕಿದ್ದೇವೆ- ಕಾವೇರಿ ಪರ ಧ್ವನಿಯೆತ್ತಿದ ಸಾ ರಾ ಗೋವಿಂದು

Public TV
1 Min Read

ರ್ನಾಟಕದಲ್ಲಿ ಕಾವೇರಿದ ಕಾವೇರಿ ಹೋರಾಟ (Cauvery Protest)  ಈ ಬೆನ್ನಲ್ಲೇ ಸೆ.29ರ ಬಂದ್ ಚರ್ಚಿಸಲು ಫಿಲ್ಮ್ ಚೇಂಬರ್‌ಗೆ ಕನ್ನಡ ಪರ ಹೋರಾಟಗಾರ ಸಾ ರಾ ಗೋವಿಂದು (Sa Ra Govindu) ಆಗಮಿಸಿ, ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಫಿಲ್ಮ್ ಚೇಂಬರ್ ಬಗ್ಗೆ ಮಾತನಾಡಿ, ಕಾವೇರಿ ಮಹದಾಯಿ ಮತ್ತು ಮೇಕೆದಾಟು ಯೋಜನೆಗಾಗಿ ಹಿಂದಿನಿಂದಲೂ ದೊಡ್ಡ ಹೋರಾಟ ಮಾಡಿದ್ದೇವೆ. ಅಕ್ಟೋಬರ್, ನವೆಂಬರ್ ಬಂದರೆ ಸಾಕು ಬರೀ ಹೋರಾಟದ ಕೆಲಸ ಆಗಿದೆ. ಈ ವರ್ಷ ಮಳೆಗಾಲ ಇಲ್ಲ ಅಂತ ತಮಿಳುನಾಡಿನವರು ಅರ್ಥ ಮಾಡಿಕೊಳ್ಳಬೇಕು ಎಂದು ಸಾ ರಾ ಗೋವಿಂದು ಮಾತನಾಡಿದರು. ಇದನ್ನೂ ಓದಿ:‘ಗರಡಿ’ ಟೈಟಲ್ ಟ್ರ್ಯಾಕ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯ, ಹರಿಕೃಷ್ಣ ಸಂಗೀತ

ನಮ್ಮ ಸರ್ಕಾರ ಕೂಡ ತಮಿಳುನಾಡಿಗೆ ನೀರು ಬಿಟ್ಟು ರೈತರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ಗೋವಿಂದು ಖಡಕ್ ಆಗಿ ಮಾತನಾಡಿದರು. ಇದು ನಮ್ಮ ನಾಡಿನ ಪ್ರಶ್ನೆ ಮತ್ತು ರೈತರ ಪ್ರಶ್ನೆಯಾಗಿದೆ. ಕರ್ನಾಟಕದವರು ಸತ್ತಿಲ್ಲ ಇನ್ನೂ ಬದುಕಿದ್ದೇವೆ.

ಮೋದಿಯವರು ಕಾವೇರಿ ವಿಚಾರದಲ್ಲಿ ಸೇರಿಕೊಂಡಿದ್ದಾರೆ. ಕಾವೇರಿ ಪ್ರಾಧಿಕಾರಕ್ಕೆ ನೀರು ಬಿಡಿ ಅಂತ ಹೇಳಿದ್ದಾರೆ ಎಂದು ನೇರವಾಗಿ ಕುಟುಕಿದ್ದಾರೆ. ಹಾಗಾಗಿಯೇ ಈ ರಾಜ್ಯದ ಜನ ಈ ಬಾರಿ ಬಿಜೆಪಿ ಕೈ ಹಿಡಿದಿಲ್ಲ ಅನ್ಮೋದು. ಈಗ ಕಾವೇರಿ ಪ್ರಾಧಿಕಾರವನ್ನ ಕರ್ನಾಟಕದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಈ ವಿಚಾರದಲ್ಲಿ ಮೋದಿ, ಅಮಿತ್ ಶಾ ಎಲ್ಲರೂ ಇದ್ದಾರೆ ಎಂದು ಗೋವಿಂದು ವಿರೋಧಿಸಿದ್ದಾರೆ.

ರಾಜಕೀಯ ಅಧಿಕಾರಕ್ಕಾಗಿ ಇಂತಹ ಕೆಲಸ ಮಾಡಬೇಡಿ. ಮೋದಿಯವರೇ ನೀವು ಇದೇ ತರ ಆಟ ಆಡಿದರೆ, ನಿಮ್ಮ ಪಕ್ಷ ನಾಶ ಆಗುತ್ತೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದು ರೈತರ ಕನ್ನಡಿಗರ ಶಾಪ ನೆನಪಿಟ್ಟುಕೊಳ್ಳಿ ಎಂದು ಮಾತನಾಡಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್