ಪೊಲೀಸರ ಮೇಲೆ ಕಲ್ಲು ತೂರಾಟ ಹೊಸದೇನಲ್ಲ: ಪರಮೇಶ್ವರ್ ಬೇಜವಾಬ್ದಾರಿ ಮಾತು

By
1 Min Read

ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ಸಣ್ಣ ಗಲಾಟೆ ಆಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ (Stone Pelting) ಆಗಿರೋದು ಹೊಸದೇನಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ (G Parameshwara) ಬೇಜವಾಬ್ದಾರಿಯ ಮಾತುಗಳನ್ನಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ಹಲವರ ಬಂಧನ ಆಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ಮಾಡೋದು ಹೊಸದೇನಲ್ಲ. ಈ ಹಿಂದೆಯೂ ಆಗಿದೆ, ಈಗಲೂ ಆಗುತ್ತಿದೆ. ಘಟನೆ ನಡೆದು ಹೋಗಿದೆ. ಅದನ್ನು ನಿಯಂತ್ರಿಸಲು ಪೊಲೀಸರು ಸಮರ್ಥರಿದ್ದಾರೆ ಎಂದರು.

ಅಂತಹ ಸೂಕ್ಷ್ಮ ಪ್ರದೇಶದಲ್ಲಿ ಮೊದಲೇ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಗಲಾಟೆ ನಡೆಯುವುದನ್ನು ತಡೆಯಲಾಗಿದೆ. ಸಣ್ಣ ಪ್ರಮಾಣದ ಗಲಾಟೆ ಆಗಿದೆ. ಅದನ್ನು ಅಧಿಕಾರಿಗಳು ನಿಯಂತ್ರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

ಇಡೀ ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಬ್ಯಾನರ್, ಪೋಸ್ಟರ್‌ಗಳನ್ನು ಅಳವಡಿಸುವ ಮೂಲಕ ಪ್ರಚೋದನೆ ನೀಡುತ್ತಾರೆ. ಇದು ಎಲ್ಲಾ ಕಡೆ ಆಗಿದೆ. ಅದನ್ನು ನಮ್ಮ ಅಧಿಕಾರಿಗಳು ನಿಯಂತ್ರಿಸುತ್ತಾರೆ. ಎಲ್ಲೂ ಅಂತಹ ಅಹಿತಕರ ದೊಡ್ಡ ಗಲಾಟೆ ಆಗಲು ಬಿಟ್ಟಿಲ್ಲ. ಪ್ರತಿ ಬಾರಿ ಮೆರವಣಿಗೆ ಮಾಡುವ ಸಂದರ್ಭ ಗಲಾಟೆ ಮಾಡಬೇಡಿ ಎಂದು ತಿಳಿಸುತ್ತಾರೆ. ಅದನ್ನು ಮೀರಿ ಹೋದ್ರೆ ಸರಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್