ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

By
1 Min Read

ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿ (Israel) ಸಿಲುಕಿರುವ ಭಾರತೀಯರನ್ನು (India) ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ (Operation Ajay) ಹೆಸರಿನಲ್ಲಿ ವಿಶೇಷ ವಿಮಾನಗಳನ್ನು ಕಳಿಸಿಕೊಡಲು ಸಿದ್ಧತೆ ನಡೆಸಿದೆ.

ಇಸ್ರೇಲ್‍ನಲ್ಲಿ 18,000 ಭಾರತೀಯರಿದ್ದಾರೆ. ಅವರನ್ನು ಕರೆತರಲು ವಿಶೇಷ ಚಾರ್ಟರ್ ಫ್ಲೈಟ್‍ಗಳನ್ನು ಕಳಿಸಲಾಗುವುದು. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್  (S.Jaishankar) ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಸ್ರೇಲ್, ಹಮಾಸ್ ಸಂಘರ್ಷ- ಭಾರತದ ಆರ್ಥಿಕ ಕಾರಿಡಾರ್ ಯೋಜನೆಗೆ ಯುದ್ಧದ ಕಾರ್ಮೋಡ

ಹಿಂದಿರುಗಲು ಮೊದಲು ನೋಂದಾಯಿಸಿದ ಭಾರತೀಯರಿಗೆ ಸೂಚನೆ ನೀಡಲಾಗಿದೆ. ನಾಳೆ ಭಾರತಕ್ಕೆ ಮೊದಲ ವಿಶೇಷ ವಿಮಾನದಲ್ಲಿ ಅವರನ್ನು ಕಳಿಸಲಾಗುವುದು. ಅಲ್ಲದೇ ನೋಂದಾಯಿತರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ಇಸ್ರೇಲ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

ಇದುವರೆಗೂ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಸುಮಾರು 3,000ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಹೊತ್ತ ಮೊದಲ ವಿಮಾನ – ಇಸ್ರೇಲ್‌ಗೆ ನೂರಾನೆ ಬಲ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್