ಮಹಿಷಾಸುರ ದುರ್ಗುಣಗಳ ಪ್ರತೀಕ; ಮಹಿಷ ದಸರಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ: ಪೇಜಾವರ ಶ್ರೀ

By
1 Min Read

ಚಿಕ್ಕೋಡಿ: ಮಹಿಷಾಸುರ (Mahishasur) ದುರ್ಗುಣಗಳ ಪ್ರತೀಕ ಎಂದು ಮಹಿಷ ದಸರಾ ಉತ್ಸವ ಆಚರಣೆ ಕುರಿತು ಉಡುಪಿಯ ಪೇಜಾವರ ಶ್ರೀಗಳು (Pejavara Sri) ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ಪಟ್ಟಣದ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಭಾಗಿಯಾಗಿ ಪೇಜಾವರ ಶ್ರೀಗಳು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದರು. ಮಹಿಷಾಸುರ ಮರ್ದಿನಿ ಎಂದು ಚಾಮುಂಡೇಶ್ವರಿ ಪೂಜೆ ಮಾಡುತ್ತೇವೆ. ದುಷ್ಟ ಅಂತ ಹೇಳಿ ಚಾಮುಂಡೇಶ್ವರಿ ಮಹಿಷಾಸುರನನ್ನು ಮರ್ದನ ಮಾಡಿದ್ದಾಳೆ ಎಂದು ತಿಳಿಸಿದರು.

ಚಾಮುಂಡೇಶ್ವರಿ ಉತ್ಸವವನ್ನು ಸರ್ಕಾರವೇ ಮಾಡುತ್ತಿದೆ. ಮತ್ತೊಂದು ಕಡೆ ಮಹಿಷಾಸುರನ ಉತ್ಸವ ಮಾಡುವಲ್ಲಿ ಅರ್ಥವಿಲ್ಲ. ದುರ್ಗುಣಗಳ ಉತ್ಸವ ಮಾಡುವುದು ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಇರಬೇಕೆಂದರೆ ಭಾರತ್ ಮಾತಾ ಕಿ ಜೈ ಎನ್ನಬೇಕು: ಕೇಂದ್ರ ಸಚಿವ

ಪ್ರೋ.ಕೆಎಸ್ ಭಗವಾನ್ ಒಕ್ಕಲಿಗರ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಭಗವಾನ್ ಅವರ ವಿಚಾರಕ್ಕೆ ಬಿಟ್ಟಿದ್ದು. ಸಮಾಜದಲ್ಲಿ ಹೆಸರು ಬರಲು ದೊಡ್ಡವರ ಬಗ್ಗೆ ತುಚ್ಛವಾಗಿ ನಿಂದಿಸುವ, ಪ್ರಚಾರ ಪಡೆಯುವ ಹುನ್ನಾರ ಭಗವಾನ್ ಅವರದ್ದಾಗಿದೆ ಎಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಎಸ್‌ಐ ವಾಕಥಾನ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್