ಕೇಸರಿ ಧ್ವಜದೊಂದಿಗೆ ಕುಂಕುಮ, ವಿಭೂತಿ ಹಚ್ಚಿ ವ್ಯಾಪಾರ ಮಾಡಿ: ವ್ಯಾಪಾರಿಗಳಿಗೆ ಪ್ರಮೋದ್ ಮುತಾಲಿಕ್ ಸಲಹೆ

Public TV
1 Min Read

ಉಡುಪಿ: ಈಗೀಗ ಮಳಿಗೆಗಳಿಗೆ ಹಿಂದೂ (Hindu) ಹೆಸರು ಇಟ್ಟುಕೊಂಡು ಮುಸ್ಲಿಮರು (Muslims) ವ್ಯಾಪಾರ (Trade) ಮಾಡ್ತಾರೆ. ಬಹುದೇವ ಆರಾಧಕರನ್ನು ವಿರೋಧಿಸುವವರಿಗೆ ಹಿಂದೂಗಳ ಹಣ ಬೇಕಾ ಎಂದು ಪ್ರಮೋದ್ ಮುತಾಲಿಕ್ (Pramod Muthalik) ಪ್ರಶ್ನೆ ಮಾಡಿದ್ದಾರೆ.

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangaluru) ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ವಿಚಾರದಲ್ಲಿ ಧರ್ಮದಂಗಲ್ ನಡೆಯುತ್ತಿದೆ. ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ (VHP) ಭಜರಂಗದಳ ಒತ್ತಾಯಿಸಿದೆ. ದೇಗುಲದ ಆವರಣದಲ್ಲಿ ಎಲ್ಲಾ ಸಮುದಾಯದವರಿಗೆ ವ್ಯಾಪಾರಕ್ಕೆ ಸಮಿತಿ ಅವಕಾಶ ಕೊಟ್ಟಿದೆ. ಈ ಬಗ್ಗೆ ಶ್ರೀರಾಮ ಸೇನೆಯ (Sri Ram Sena) ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಉಡುಪಿಯಲ್ಲಿ (Udupi) ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬೇಕಾದಷ್ಟು ಪ್ರೀತಿ ಮಾಡಿ, ಸಲಿಂಗಿ ಮದುವೆ ಬೇಡ: ಪ್ರಮೋದ್ ಮುತಾಲಿಕ್

ವಿಶ್ವ ಹಿಂದೂ ಪರಿಷತ್ ಹೋರಾಟಕ್ಕೆ ನನ್ನ ಬೆಂಬಲ ಇದೆ. ಹಿಂದೂಗಳು ಹಣೆ ಮೇಲೆ ಕುಂಕುಮ, ಭಸ್ಮ ಹಚ್ಚಿಕೊಂಡು ವ್ಯಾಪಾರ ಮಾಡಿ ಎಂದು ಮುತಾಲಿಕ್ ಸಲಹೆ ನೀಡಿದರು. ಆಸ್ತಿಕತೆ ಬೇಡ. ಹಿಂದೂಗಳ ವ್ಯಾಪಾರ ಬೇಕು, ಲಾಭ ಬೇಕು ಅಂದ್ರೆ ಹೇಗೆ? ಗೋಪೂಜೆ ನಡೆಯುವ ದೇವಸ್ಥಾನದಲ್ಲಿ ಗೋಹತ್ಯೆ ಮಾಡುವವರಿಗೆ ಯಾಕೆ ಅವಕಾಶ ಕೊಡಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಎಂ ಇಬ್ರಾಹಿಂ ಸಹಾನುಭೂತಿ ಗಿಟ್ಟಿಸಿಕೊಳ್ಳುವ ಮನೋಭಾವದಲ್ಲಿದ್ದಾರೆ: ಡಾ.ಶಿವರಾಜ್ ಪಾಟೀಲ್

ಅಲ್ಲಾಹ್ ಒಬ್ಬನೇ ದೇವರು ಅನ್ನೋರಿಗೆ ಬಹುದೇವ ಉಪಾಸಕರ ವ್ಯಾಪಾರ ಯಾಕೆ ಬೇಕು? ದೇಶದ ಸುರಕ್ಷತೆಯ ಹಿನ್ನೆಲೆಯಲ್ಲಿ ದಯವಿಟ್ಟು ಈ ರೀತಿ ಅವಕಾಶ ಬೇಡ. ಹಿಂದೂಗಳಿಗೆ ಮಾತ್ರ ಅವಕಾಶ ನೀಡಿ. ಹಿಂದೂ ವ್ಯಾಪಾರಿಗಳ ಮಳಿಗೆಗೆ ಕೇಸರಿ ಧ್ವಜ ಅಳವಡಿಸಿದ ಕ್ರಮ ಸರಿಯಾಗಿದೆ ಎಂದರು. ಇದನ್ನೂ ಓದಿ: ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್