ರಾಮನಗರವನ್ನು ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡ್ತೀನಿ: ಡಿಕೆಶಿ

Public TV
1 Min Read

ರಾಮನಗರ: ಇನ್ಮುಂದೆ ರಾಮನಗರ ಜಿಲ್ಲೆ ಇರೋದಿಲ್ಲ, ಇದನ್ನು ಬೆಂಗಳೂರು (Bengaluru) ಜಿಲ್ಲೆಯಾಗಿ ಮರುನಾಮಕರಣ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

ಕನಕಪುರದ ವೀರಭದ್ರಸ್ವಾಮಿ ದೇವಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ಮುಂದೆ ರಾಮನಗರ (Ramanagara) ಜಿಲ್ಲೆ ಇರೋದಿಲ್ಲ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಯಾರೋ ಹೆಸರು ಮಾಡಿಕೊಳ್ಳಬೇಕು ಅಂತಾ ರಾಮನಗರ ಜಿಲ್ಲೆ ಮಾಡಿದ್ರು. ಮತ್ತೆ ರಾಮನಗರವನ್ನು ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡುತ್ತೇನೆ ಎಂದರಲ್ಲದೇ ರಾಮನಗರ ಇಲ್ಲ.. ಬೆಂಗಳೂರು ಅಷ್ಟೇ ಎಂದು ದೇವರ ಮೇಲೆ ಪ್ರಮಾಣ ಮಾಡಿದ್ದಾರೆ. ಇದನ್ನೂ ಓದಿ: ‘ಸಲಿಂಗ ವಿವಾಹ’ ಪುರಾಣ; ಭಾರತದಲ್ಲಿ ಅನುಮತಿ ಯಾಕಿಲ್ಲ? – ಯಾವ್ಯಾವ ದೇಶಗಳಲ್ಲಿ ಸಿಕ್ಕಿದೆ ಮಾನ್ಯತೆ?

ಇದೇ ವೇಳೆ ರೈತರು ಭೂಮಿ ಮಾರಾಟ ಮಾಡದಂತೆ ತಾಕೀತು ಮಾಡಿದ ಡಿಕೆಶಿ, ಒಂದೊಂದು ಅಡಿ ಲೆಕ್ಕದಲ್ಲಿ ಭೂಮಿ ಬೆಲೆ ಹೆಚ್ಚಾಗುತ್ತೆ. ನೀವು ರಾಮನಗರದವರಲ್ಲ, ನೀವು ಬೆಂಗಳೂರು ಜಿಲ್ಲೆಯವರು. ಸುಮ್ನೆ ನಮ್ಮನ್ನ ರಾಮನಗರ ಅಂತ ಹೇಳಿ ಮೂಲೆಗೆ ತಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಕಾರಾಗೃಹದ ಮೇಲೆ ದಾಳಿ – ತಪಾಸಣೆ ನಡೆಸಿದ ಪೊಲೀಸರಿಗೆ ಸಿಕ್ಕಿದ್ದೇನು?

ಗ್ರಾಮಾಂತರನೂ ಅಲ್ಲ, ಬೆಂಗಳೂರು ಜಿಲ್ಲೆಯವರು. ದೇವರ ಸನ್ನಿಧಿಯಲ್ಲೀ ವಿಜಯದಶಮಿ ದಿನ ಈ ಮಾತನ್ನು ಹೇಳ್ತಿದ್ದೀನಿ, ಆ ಕೆಲಸ ಮಾಡೇ ಮಾಡುತ್ತೇನೆ. ರಾಮನಗರ ಬೆಂಗಳೂರು ಆಗುತ್ತೆ. ರೈತರು ಯಾರೂ ಭೂಮಿಯನ್ನು ಮಾರಾಟ ಮಾಡ್ಬೇಡಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮನ್ನು ಕ್ಷಮಿಸಿಬಿಡಿ ಪಾಕಿಸ್ತಾನ – ಅಫ್ಘಾನ್‌ ವಿರುದ್ಧ ಸೋಲಿನ ಬಳಿಕ ಅಬ್ದುಲ್ಲಾ ಶಫೀಕ್ ಭಾವುಕ ಟ್ವೀಟ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್