ಹುಲಿ ಉಗುರು ಕೇಸ್‌ – ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ: ಆರಗ ಕಿಡಿ

Public TV
1 Min Read

ಬೆಂಗಳೂರು: ಹುಲಿ ಉಗುರು (Tiger Claws) ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ (Karnataka Government) ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.   ಇದನ್ನೂ ಓದಿ: ಹುಲಿ ಉಗುರು ಪ್ರಕರಣ – ಸ್ಯಾಂಡಲ್‌ವುಡ್ ನಟರ ಬಳಿಕ ರಾಜಕಾರಣಿಗಳಿಗೂ ಸಂಕಷ್ಟ

ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ ವಸ್ತುಗಳು ಮಲೆನಾಡು, ಕರಾವಳಿ ಭಾಗದಲ್ಲಿ ಅಲಂಕಾರಿಕ ವಸ್ತುವಾಗಿತ್ತು. ಮಕ್ಕಳಿಗೆ ಹುಲಿ ಉಗುರು ತೊಡಿಸುತ್ತಿದ್ದರು. ಏಕಾಏಕಿ ವ್ಯಕ್ತಿಗಳನ್ನು ಬಂಧನ ಮಾಡಿದರೆ ಜೈಲುಗಳಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದು ಹೇಳಿದರು.

ವನ್ಯಜೀವಿ ರಕ್ಷಣಾ ಕಾಯ್ದೆಗೆ ನಾನು ವಿರೋಧಿ ಅಲ್ಲ. ಆದರೆ ಹಿಂದಿನ ಕಾಲದಿಂದಲೂ ಮನೆಯಲ್ಲಿ ಉಗುರು ಇಟ್ಟಿರುವವರನ್ನೆಲ್ಲ ಬಂಧಿಸುವುದು ಸರಿಯಲ್ಲ. ಈ ಬಗ್ಗೆ ಸರ್ಕಾರ ಚರ್ಚೆ ನಡೆಸಬೇಕು ಎಂದು ಜ್ಞಾನೇಂದ್ರ ಆಗ್ರಹಿಸಿದರು.

 

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್