ಹೆಚ್‌ಡಿಕೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್‌ಸಿ ಬಾಲಕೃಷ್ಣ

Public TV
1 Min Read

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಮ್ಮ ಆಸ್ತಿ ಮೌಲ್ಯ ಹೆಚ್ಚಿಸಲು ಜಿಲ್ಲೆಗೆ ಮರುನಾಮಕರಣ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ (HC Balakrishna) ಮತ್ತೆ ಸವಾಲು ಹಾಕಿದ್ದಾರೆ.

ರಾಮಾಯಣದ ಕಥೆ ಹೇಳುವ ಮೂಲಕ ಹೆಚ್‌ಡಿಕೆಗೆ ಟಕ್ಕರ್ ಕೊಟ್ಟಿರೋ ಬಾಲಕೃಷ್ಣ, ನೀವು ಮಾಡಿರೋ ಆರೋಪಗಳನ್ನು ಒಪ್ಪುತ್ತೇವೆ. ಆದರೆ ನೀವು ಸತ್ಯಹರಿಶ್ಚಂದ್ರ ಆಗಿದ್ದರೆ, ಸೀತೆ ಪತಿವ್ರತೆ ಅಂತ ನಿರೂಪಿಸಲು ಅಗ್ನಿಪ್ರವೇಶ ಮಾಡಿದ್ದರು. ಬಳಿಕ ಅಗ್ನಿಯಿಂದ ಸುಡದೇ ಆಚೆ ಬಂದು ಪತಿವ್ರತೆ ಅಂತ ನಿರೂಪಿಸಿದ್ದಳು. ಹಾಗೆಯೇ ನಿಮ್ಮದು ಸತ್ಯಹರಿಶ್ಚಂದ್ರ ಕುಟುಂಬ ಆಗಿದ್ದರೆ ನೀವೂ ಬಂದು ಪ್ರಮಾಣ ಮಾಡಿ ನಿರೂಪಿಸಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕೇರಳದ ಕಲಮಶ್ಯೆರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

ಧರ್ಮಸ್ಥಳದಲ್ಲಿ ಬಂದು ನಾನು ಸರ್ಕಾರದ ಹಣ ತಿಂದಿಲ್ಲ ಎಂದು ಪ್ರಮಾಣ ಮಾಡಿ. ಪ್ರಮಾಣ ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಆರೋಪ ಮಾಡುವುದನ್ನು ಬಿಟ್ಟು ಸತ್ಯ ನಿರೂಪಿಸಿ. ಇಲ್ಲ ಸುಮ್ಮನೆ ಖಾಲಿ ಮಾತನಾಡುವುದನ್ನು ಬಿಡಿ ಎಂದು ಹೆಚ್‌ಡಿಕೆಗೆ ಬಾಲಕೃಷ್ಣ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್