ಭತ್ತದ ಗದ್ದೆಗೆ ನೀರುಕಟ್ಟಲು ಹೋದಾಗ ಮಾರಕಾಸ್ತ್ರದಿಂದ ವ್ಯಕ್ತಿಯ ಕೊಲೆ

By
1 Min Read

ರಾಯಚೂರು: ಹಳೇ ವೈಷಮ್ಯದ (Old Feud) ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ (Manvi) ತಾಲೂಕಿನ ರಬಣಕಲ್ ಕ್ಯಾಂಪ್ ಬಳಿ ನಡೆದಿದೆ.

ಮದ್ಲಾಪುರ ಗ್ರಾಮದ ಪ್ರಸಾದ್ (38) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಮಾರಾಕಾಸ್ತ್ರದಿಂದ ದಾಳಿ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗ್ಗೆ ಭತ್ತದ ಗದ್ದೆಗೆ ನೀರುಕಟ್ಟಲು ಹೋದ ಸಂದರ್ಭ ಏಕಾಏಕಿ ಮೂವರು ದಾಳಿ ಮಾಡಿದ್ದಾರೆ. ಜಮೀನಿನಲ್ಲಿ ಕಾದು ಕುಳಿತು ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ರಬಣಕಲ್ ಗ್ರಾಮದ ರಾಮು, ಕೇಶವ ಸೇರಿ ಮೂರು ಮಂದಿ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಾಗರ ಹಾವು ಓಡಿಸಲು ಹೊಗೆ ಹಾಕಿದ ಕುಟುಂಬ- ಇಡೀ ಮನೆ ಭಸ್ಮ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್