ಇನ್ಮುಂದೆ ರಾಜ್ಯದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ಕಡ್ಡಾಯ

By
2 Min Read

– ಪ್ಯಾನಿಕ್ ಬಟನ್, ಲೊಕೆಷನ್ ಟ್ರ್ಯಾಕಿಂಗ್‌ ಡಿವೈಸ್ ಅಳವಡಿಕೆಗೆ 7,599 ರೂ. ಫಿಕ್ಸ್
– ಡಿವೈಸ್ ಅಳವಡಿಸದಿದ್ರೇ ಎಫ್‌ಸಿ ನವೀಕರಣವಾಗಲ್ಲ
– ಸಾರಿಗೆ ಇಲಾಖೆಯ ಆದೇಶಕ್ಕೆ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ವಿರೋಧ
– ಕರ್ನಾಟಕ ಲಾರಿ ಅಸೋಸಿಯೇಷನ್‌ನಿಂದ ರಾಮಲಿಂಗಾರೆಡ್ಡಿಗೆ ಪತ್ರ

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆ (Transport Department) ಇದೇ ತಿಂಗಳಿನಿಂದ ಮಹತ್ವದ ಆದೇಶವೊಂದನ್ನು ಜಾರಿಗೊಳಿಸಿದೆ. ಪರ್ಮಿಟ್ ವಾಹನಗಳು (Permit Vehicle) ಕಡ್ಡಾಯವಾಗಿ ಪ್ಯಾನಿಕ್ ಬಟನ್, GPS ಡಿವೈಸ್ ಅಳವಡಿಕೆ ಮಾಡುವಂತೆ ಆದೇಶದಲ್ಲಿ ಸೂಚಿಸಿದ್ದು, ಇದಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

- Advertisement -

ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸಾರಿಗೆ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ. ಈ ಬೆನ್ನಲ್ಲೇ ಡಿಸೆಂಬರ್ 1 ರಿಂದ (ಶುಕ್ರವಾರ) ರಾಜ್ಯದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್ (Panic Button) ಹಾಗೂ ಲೋಕೇಷನ್ ಟ್ರಾಕಿಂಗ್ ಡಿವೈಸ್ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಇದೆನ್ನೂ ಓದಿ: ಬೆಂಗಳೂರಿನ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ತಾಳಮದ್ದಳೆ, ಕಾರ್ತಿಕ ದೀಪೋತ್ಸವ, ಪಲ್ಲಕ್ಕಿ ಉತ್ಸವ

- Advertisement -

- Advertisement -

ದೆಹಲಿಯ ಕಾಲೇಜು ವಿದ್ಯಾರ್ಥಿನಿ ಮೇಲೆ ಬಸ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಳಿಕ ಕೇಂದ್ರಸರ್ಕಾರ ದೇಶದ ಎಲ್ಲಾ ಸಾರ್ವಜನಿಕ ಸೇವಾ ವಾಹನಗಳಲ್ಲಿ/ಪರ್ಮಿಟ್ ವಾಹನಗಳಿಗೆ GPS ಡಿವೈಸ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸಲು ಸೂಚಿಸಿತ್ತು. ಈ ಹಿನ್ನೆಲೆ ಇದೇ ತಿಂಗಳಿನಿಂದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ಡಿವೈಸ್ ಅಳವಡಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

- Advertisement -

ಕೇಂದ್ರ ಹಾಗೂ ರಾಜ್ಯ ಸರ್ಕಾರದ 60:40 ಅನುಪಾತದ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೆ 2035.90 ಲಕ್ಷ ರೂ.ಗಳ ವೆಚ್ಚಕ್ಕೆ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಹೀಗಾಗಿ ಪರ್ಮಿಟ್ ವಾಹನಗಳ ಮಾಲೀಕರು ಅರ್ಹ ಕಂಪನಿಗಳಿಂದ 7,599 ರೂ. ನೀಡಿ ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಡಿಸೆಂಬರ್ 1 ರಿಂದ ಈ ಯೋಜನೆ ಪ್ರಾರಂಭವಾಗಿದ್ದು, ಒಂದು ವರ್ಷದೊಳಗೆ (30-11-24) ರ ಒಳಗೆ ಪರ್ಮಿಟ್ ವಾಹನಗಳು ಈ ಡಿವೈಸ್ ಹಾಕಿಸಿಕೊಳ್ಳಬೇಕು. ಇಲ್ಲದಿದ್ದರೇ ಸಾರಿಗೆ ಇಲಾಖೆ ವಾಹನಗಳ ಎಫ್‌ಸಿ ನವೀಕರಣಕ್ಕೆ ಬ್ರೇಕ್ ಹಾಕುವುದಾಗಿ ಎಚ್ಚರಿಸಿದೆ.

ಸರ್ಕಾರದ ಈ ಆದೇಶಕ್ಕೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಲಾರಿ ಅಸೋಸಿಯೇಷನ್ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜಶರ್ಮಾ, ಪ್ಯಾನಿಕ್ ಬಟನ್, ಜಿಪಿಎಸ್ ಅಳವಡಿಸಿದ ನಂತರ ಜಿಪಿಎಸ್, ಪ್ಯಾನಿಕ್ ಬಟನ್ ಹೇಗೆ, ಯಾರು ಕಂಟ್ರೋಲ್ ಮಾಡ್ತಾರೆ ಅನ್ನೋ ಮಾಹಿತಿ ಕೊಟ್ಟಿಲ್ಲ. ಜೊತೆಗೆ ಈ ಡಿವೈಸ್ ಅಳವಡಿಸಲು ಖಾಸಗಿ ಕಂಪನಿಗಳಲ್ಲಿ 3,000-3,500 ರೂಪಾಯಿ ಆಗುತ್ತೆ. ಆದ್ರೆ ಸರ್ಕಾರ ಸೆಲೆಕ್ಟ್ ಮಾಡಿದ 13 ಕಂಪನಿಗಳಿಗೆ 8,500 ರೂಪಾಯಿ ಯಾಕೆ ಕೊಡಬೇಕು. ಇದ್ರ ಬಗ್ಗೆ ಚರ್ಚೆಯಾಗಲಿ, ಅಲ್ಲಿಯವರೆಗೂ ಈ ಆದೇಶ ವಾಪಾಸ್ ಪಡೆಯಲಿ ಅಂತ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ಲಾರಿ ಅಸೋಸಿಯೇಷನ್‌ನಿಂದಲೂ ವಿರೋಧ ವ್ಯಕ್ತವಾಗಿದ್ದು, ಈ ಆದೇಶವನ್ನು ಪರಿಶೀಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಪತ್ರ ಬರೆದಿದ್ದಾರೆ. ಇದೆನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

Share This Article