ಚಿರು ಭೇಟಿ ಮಾಡಿ ಅಭಿನಂದಿಸಿದ ಶಿವರಾಜ್ ಕುಮಾರ್

Public TV
1 Min Read

ತ್ತೀಚೆಗಷ್ಟೇ ತೆಲುಗಿನ ಖ್ಯಾತ ನಟ ಚಿರಂಜೀವಿಗೆ (Shivaraj Kumar) ದೇಶ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣ (Padma Vibhushan) ದೊರೆತಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಹೈದರಾಬಾದ್ ನ ಚಿರಂಜೀವಿ (Chiranjeevi) ಮನೆಗೆ ಭೇಟಿ ನೀಡಿ ಅಭಿನಂದಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಂದಿಸಿದ ಫೋಟೋವನ್ನು ಚಿರಂಜೀವಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಚಿರಂಜೀವಿ ಕುಟುಂಬಕ್ಕೂ ಮತ್ತು ಡಾ.ರಾಜ್ ಕುಮಾರ್ ಕುಟುಂಬಕ್ಕೂ ಮೊದಲಿನಿಂದಲೂ ಒಳ್ಳೆಯ ನಂಟಿದೆ. ಅನೇಕ ಕಾರ್ಯಕ್ರಮಗಳಲ್ಲಿ ಚಿರಂಜೀವಿ ಕುಟುಂಬ ಭಾಗಿಯಾಗಿದೆ. ಹಾಗಾಗಿ ಶಿವರಾಜ್ ಕುಮಾರ್, ಭೇಟಿ ನೀಡಿ ಅಭಿನಂದಿಸಿದ್ದಾರೆ. ಶಿವಣ್ಣ ಒಟ್ಟಿಗೆ ಕಳೆದ ಸಮಯವನ್ನು ಚಿರು ನೆನಪಿಸಿಕೊಂಡಿದ್ದಾರೆ.

ಈ ನಡುವೆ ಚಿರಂಜೀವಿ ಪುತ್ರ ರಾಮ್ ಚರಣ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯೂ ಇದೆ. ಕಥೆ ಕೇಳಿರುವ ಕುರಿತು ಈ ಹಿಂದೆ ಶಿವಣ್ಣ ಕೂಡ ಒಪ್ಪಿಕೊಂಡಿದ್ದರು. ಅಲ್ಲದೇ ರಾಮ್ ಚರಣ್ ಮದುವೆಗೂ ಪುನೀತ್ ರಾಜ್ ಕುಮಾರ್ ಮತ್ತು ಶಿವಣ್ಣ ಹೋಗಿದ್ದರು.

Share This Article