ಕತಾರ್‌ನಿಂದ ನೌಕಾಸೇನಾ ಮಾಜಿ ಅಧಿಕಾರಿಗಳ ಬಿಡುಗಡೆಯಲ್ಲಿ ನನ್ನ ಪಾತ್ರವಿಲ್ಲ- ಶಾರುಖ್ ಖಾನ್

Public TV
1 Min Read

ತಾರ್‌ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳ (Navy Veterans) ಬಿಡುಗಡೆಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಶಾರುಖ್ ಖಾನ್ ಕಚೇರಿ ಸ್ಪಷ್ಟನೆ ನೀಡಿದೆ. ಶಾರುಖ್ ಬಗ್ಗೆ ಹಬ್ಬಿದ್ದ ವದಂತಿಗೆ ಉತ್ತರಿಸಿದ್ದಾರೆ.

ಶಾರುಖ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ ನಟನ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕತಾರ್‌ನಿಂದ ಭಾರತದ ನೌಕಾ ಸೇನಾ ಅಧಿಕಾರಿಗಳನ್ನು ಬಿಡುಗಡೆ ಮಾಡುವುದರಲ್ಲಿ ಶಾರುಖ್ ಖಾನ್ ಅವರ ಉದ್ದೇಶಿತ ಪಾತ್ರದ ಬಗ್ಗೆ ವರದಿಗಳ ಬಗ್ಗೆ, ಶಾರುಖ್ ಖಾನ್ ಅವರ ಕಚೇರಿಯು ಅವರ ಪಾಲ್ಗೊಳ್ಳುವಿಕೆಯ ಅಂತಹ ಯಾವುದೇ ಸಮರ್ಥನೆಗಳು ಆಧಾರರಹಿತವಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:‘ಅನಿಮಲ್’ ಸಕ್ಸಸ್ ನಂತರ ಬ್ಯುಸಿಯಾಗಿರುವ ರಶ್ಮಿಕಾ ಈ ಚಿತ್ರವನ್ನು ಅರ್ಧಕ್ಕೆ ನಿಲ್ಲಿಸಿದ್ರಾ?

ಈ ವಿಷಯದಲ್ಲಿ ಶಾರುಖ್ ಖಾನ್ ಅವರು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ. ರಾಜತಾಂತ್ರಿಕತೆ ಮತ್ತು ರಾಜ್ಯಕಾರ್ಯವನ್ನು ಒಳಗೊಂಡಿರುವ ಎಲ್ಲಾ ವಿಷಯಗಳನ್ನು ನಮ್ಮ ಅತ್ಯಂತ ಸಮರ್ಥ ನಾಯಕರು ಉತ್ತಮವಾಗಿ ಕಾರ್ಯಗತಗೊಳಿಸುತ್ತಾರೆ. ಶಾರುಖ್ ಖಾನ್, ಎಲ್ಲಾ ಭಾರತೀಯರಂತೆ ನೌಕಾಪಡೆಯ ಅಧಿಕಾರಿಗಳು ಮನೆಗೆ ಮರಳಿರುವುದಕ್ಕೆ ಖುಷಿಯಿದೆ ಮತ್ತು ಅವರಿಗೆ ಶುಭ ಹಾರೈಸುತ್ತಾರೆ ಎಂದು ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ತಿಳಿಸಿದ್ದಾರೆ.

ಬೇಹುಗಾರಿಕೆ ಆರೋಪದಲ್ಲಿ ಬಂಧಿತರಾಗಿ ಕತಾರ್‌ನ ಸೆರೆಮನೆಯಲ್ಲಿದ್ದ 8 ಭಾರತೀಯ ನೌಕಾ ಸೇನಾ ನಿವೃತ್ತ ಅಧಿಕಾರಿಗಳನ್ನು ಕತಾರ್ ಸರ್ಕಾರ ಬಿಡುಗಡೆ ಮಾಡಿದ್ದು, ಅವರಲ್ಲಿ 7 ಜನರು ಸ್ವದೇಶಕ್ಕೆ ಮರಳಿದ್ದಾರೆ.

ಇತ್ತೀಚೆಗೆ ಶಾರುಖ್ ಖಾನ್ ಅವರು ಕತಾರ್‌ನಲ್ಲಿದ್ದರು. ಈ ವೇಳೆ, ಕತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್ ಥಾನಿ ಅವರನ್ನು ಭೇಟಿಯಾಗಿದ್ದರು.

Share This Article