ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

By
1 Min Read

ವಿಜಯಪುರ: ವ್ಯಕ್ತಿಯೊಬ್ಬ ಪತ್ನಿಯ (Wife) ಶೀಲ ಶಂಕಿಸಿ ಬರ್ಬರ ಹತ್ಯೆಗೈದ ಘಟನೆ ತಿಕೋಟ ತಾಲೂಕಿನ ಹುಬನೂರು ತಾಂಡಾ -2 ರಲ್ಲಿ ಘಟನೆ ನಡೆದಿದೆ.

ರೇಶ್ಮಾ ರಾಠೋಡ್ (25) ಹತ್ಯೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಅಶೋಕ್ ರಾಠೋಡ್ (33) ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಪತ್ನಿಯ ಶೀಲ ಶಂಕಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಮನೆ ಮೇಲೆ ವಿದ್ಯುತ್ ಕಂಬ ಉರುಳಿಸಿ ಪುಂಡಾಟ ಮೆರೆದ ಕಾಡಾನೆ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಆರೋಪಿ ಕುಡಿದು ಬಂದು ಮನೆಯಲ್ಲಿ ಪತ್ನಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ. ಇದರಿಂದ ಬೇಸತ್ತು ಮಹಿಳೆ ತನ್ನ ತವರು ಮನೆಗೆ ಹೋಗಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿ ಮಹಿಳೆಯ ಮೇಲೆ ಸಲಾಕೆಯಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. 11 ವರ್ಷಗಳ ಹಿಂದೆ ಇವರಿಬ್ಬರ ಮದುವೆಯಾಗಿತ್ತು. ದಂಪತಿಗೆ ಮೂವರು ಮಕ್ಕಳು ಸಹ ಇದ್ದಾರೆ.

ಈ ಸಂಬಂಧ ವಿಜಯಪುರ (Vijapur) ಗ್ರಾಮೀಣ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುಪಿ ಟೈಂ ಬಾಂಬ್ ಪ್ರಕರಣ – ಮುಂಗಡವಾಗಿ 10 ಸಾವಿರ ನೀಡಿದ್ದ ಮಹಿಳೆ ಅರೆಸ್ಟ್

Share This Article