ವರ್ತೂರು ಸಂತೋಷ್ ಟೀಮ್ ವಿರುದ್ಧ ಜಗ್ಗೇಶ್ ದೂರು

Public TV
2 Min Read

ಹುಲಿ ಉಗುರು  (Tiger Claw) ವಿಷಯಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವರು ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ನಿಂದಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಜಗ್ಗೇಶ್ ವಿರುದ್ಧ ವರ್ತೂರು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಜಗ್ಗೇಶ್ ಅವರನ್ನು ನಿಂದಿಸುವಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಜಗ್ಗೇಶ್ ಮನೆಗೆ ಮುತ್ತಿಗೆ ಹಾಕುವ ಬೆದರಿಕೆಯನ್ನೂ ಹಾಕಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಗ್ಗೇಶ್ ದೂರು ನೀಡಿದ್ದಾರೆ.

ರಂಗನಾಯಕ ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ರಿಯಲ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ವರ್ತೂರು ಸಂತೋಷ್‌ಗೆ ಜಗ್ಗೇಶ್ (Jaggesh) ‘ಕಿತ್ತೋದ್ ನನ್ಮಗ’ ಎಂದು ಅಸಮಾಧಾನ ಹೊರಹಾಕಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.  ‘ಬಿಗ್‌ ಬಾಸ್‌ ಕನ್ನಡ 10’ರ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ (Varthur Santhosh) ಗಮನಕ್ಕೂ ಬಂದಿದೆ. ಜಗ್ಗೇಶ್‌ ಮಾತಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬಿಡಿ ಅವರು ದೊಡ್ಡವರು. ನಾನು ಹೇಳುವುದು ಇಷ್ಟೆ, ಕಾಲಾಯ ತಸ್ಮೈ ನಮಃ ಅಷ್ಟೆ. ಎಲ್ಲದಕ್ಕೂ ಉತ್ತರ ಕೊಡಲೇ ಬೇಕು ಅಂತೇನೂ ಇಲ್ಲ. ಕೆಲವೊಂದಕ್ಕೆ ಉತ್ತರ ಕೊಡಬೇಕು. ಕೆಲವೊಂದಕ್ಕೆ ಮೌನವಾಗಿದ್ದರೆ ಸಾಕು ಉತ್ತರ ಸಿಗುತ್ತದೆ ಎಂದು ಜಗ್ಗೇಶ್ ಮಾತಿಗೆ ವರ್ತೂರು ಉತ್ತರ ನೀಡಿದ್ದಾರೆ. ಬಳಿಕ ಸುದೀಪಣ್ಣನ ಬಳಿ ನಾನು ಕೆಲವೊಂದು ವಿಚಾರಗಳನ್ನು ಕಲಿತಿದ್ದೀನಿ. ಸುದೀಪಣ್ಣ ಸದಾ ಒಂದು ಮಾತು ಹೇಳ್ತಾರೆ. ವರ್ತೂರು ಅವರೇ ಎಲ್ಲಾ ಜಾಗದಲ್ಲೂ ಮಾತನಾಡಬೇಕು ಅಂತಿಲ್ಲ. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಅಂತ. ತೂಕದ ಜೊತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕು ಎಂದು ಮಾತನಾಡಿದ್ದಾರೆ.

‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಾನು ಹುಲಿ ತರ ಬದುಕಬೇಕು ಅಂತ ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು ಎಂದು ಜಗ್ಗೇಶ್ ಮಾತನಾಡಿದ್ದರು.

ಸಂತೋಷ್ ಬಗ್ಗೆ ಜಗ್ಗೇಶ್ ಈ ರೀತಿ ಹೇಳಿದ್ದಾರೆ, ಜಗ್ಗೇಶ್ ಅಂತಹವರು ‘ಕಿತ್ತೋದ್ ನನ್ಮಗ’ ಎಂಬ ಪದ ಬಳಕೆ ಮಾಡಿದ್ದು ಸರಿಯಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಹಿರಿಯ ನಟ ಜಗ್ಗೇಶ್ ಬಗ್ಗೆ ಪರ ಮತ್ತು ವಿರೋಧವಾಗಿ ಚರ್ಚೆ ಶುರುವಾಗಿತ್ತು.

 

ಮೂರು ತಿಂಗಳ ಹಿಂದೆ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ಕಾಲಿಟ್ಟಾಗ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಅದರಿಂದ ಜೈಲಿಗೆ ಕೂಡ ಹೋಗಿದ್ದರು. ಆನಂತರ ಜಾಮೀನು ಪಡೆದು ಮತ್ತೆ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಅನೇಕರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ವಿವಾದ ಜಗ್ಗೇಶ್ ಅವರಿಗೂ ಬಿಸಿ ಮುಟ್ಟಿಸಿತ್ತು.

Share This Article