ಪ್ರೀತಿಯ ಕಾಟಕ್ಕೆ ಬೇಸತ್ತು ಅಪ್ರಾಪ್ತೆ ಆತ್ಮಹತ್ಯೆ

Public TV
1 Min Read

ಶಿವಮೊಗ್ಗ: ಪ್ರೀತಿಯ (Love) ಕಾಟಕ್ಕೆ ಬೇಸತ್ತು ಅಪ್ರಾಪ್ತೆ (Minor) ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿಹಳ್ಳಿಯಲ್ಲಿ ನಡೆದಿದೆ.

ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಈಕೆಗೆ ಪ್ರೀತಿಸು, ಪ್ರೀತಿಸು ಎಂದು ಕಾಟಕೊಡುತ್ತಿದ್ದ. ಯುವಕನ ಪ್ರೀತಿ ನಿರಾಕರಿಸಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡುತ್ತಿದ್ದು, ಕಳೆದ ಎರಡು ತಿಂಗಳ ಹಿಂದೆ ಬಾಲಕಿ ಕುಟುಂಬಸ್ಥರು ವಾರ್ನಿಂಗ್ ಮಾಡಿದ್ದರು. ಇದನ್ನೂ ಓದಿ: ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ – ಲಕ್ಷುರಿ ಸ್ಪಾದಲ್ಲಿದ್ದ 7 ಥಾಯ್‌ ಯುವತಿಯರ ರಕ್ಷಣೆ

ಆ ಸಮಯದಲ್ಲಿ ಇನ್ನುಮುಂದೆ ಹೀಗೆ ಮಾಡುವುದಿಲ್ಲ ಎಂದು ಯುವಕ ತ್ಯಾಗರಾಜ್ ಹೇಳಿದ್ದ. ಇದೀಗ ಬಾಲಕಿ ಯುವಕನ ಕಾಟ ತಾಳಲಾರದೇ ಶನಿವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೀಲಗಿರಿ ತೋಪಿನಲ್ಲಿ ಬಿ.ಟೆಕ್ ವಿದ್ಯಾರ್ಥಿಯ ಬರ್ಬರ ಹತ್ಯೆ – ಸುಟ್ಟು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆ

 

Share This Article