ಜಮ್ಮು ಕಾಶ್ಮೀರದಲ್ಲಿ ದೋಣಿ ಮುಳುಗಡೆ – ಶಾಲಾ ಮಕ್ಕಳು ಸೇರಿದಂತೆ ಹಲವರು ನಾಪತ್ತೆ

Public TV
1 Min Read

ಶ್ರೀನಗರ: ಗಂಡಾಬಾಲ್‌ನಿಂದ ಶ್ರೀನಗರದ (Srinagar) ಬಟ್ವಾರಕ್ಕೆ ಶಾಲಾ ಮಕ್ಕಳು ಮತ್ತು ಸ್ಥಳೀಯರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು (Boat) ಝೇಲಂ ನದಿಯಲ್ಲಿ (Jhelum River) ಮುಳುಗಿದ ಪರಿಣಾಮ ಶಾಲಾ ಮಕ್ಕಳು ಸೇರಿ ಹಲವರು ನಾಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ರಾಜ್ಯ ವಿಪತ್ತು ಪರಿಹಾರ ಪಡೆ ನಾಪತ್ತೆಯಾದ ಪ್ರಯಾಣಿಕರಿಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬೆಂಗಳೂರಿನ ಕಂಪನಿಯಿಂದ ‘ಸೂರ್ಯ ತಿಲಕ ಯಂತ್ರ’ ಕೊಡುಗೆ – ಏನಿದರ ವೈಶಿಷ್ಟ್ಯ?

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಝೇಲಂ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಇದನ್ನೂ ಓದಿ: ಸೇತುವೆಯಿಂದ ಬಸ್‌ ಕೆಳಗೆ ಬಿದ್ದು 5 ಮಂದಿ ಸಾವು

Share This Article