ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ

Public TV
1 Min Read

– ಗೋ ಬ್ಯಾಕ್ ಮೋದಿ ಎಂದು ಧಿಕ್ಕಾರ

ದಾವಣಗೆರೆ: ಮೋದಿ ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಹಾಕಲು ಎನ್‌ಎಸ್‌ಯುಐ (NSUI) ಯತ್ನಿಸಿದ ಘಟನೆ ದಾವಣಗೆರೆಯ (Davanagere) ಅಂಬೇಡ್ಕರ್ ಸರ್ಕಲ್‌ನಲ್ಲಿ ನಡೆದಿದೆ.

ಎನ್‌ಎಸ್‌ಯುಐ ಸಂಘಟನೆಯಿಂದ ಮೋದಿಗೆ (Narendra Modi) ಚೊಂಬು ಪ್ರದರ್ಶನಕ್ಕೆ ಯತ್ನಿಸಿದ್ದು, ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ (Protest) ನಡೆಸಿದ್ದಾರೆ. ಖಾಲಿ ಚೊಂಬು ಪೋಸ್ಟರ್ ಪ್ರದರ್ಶನ ಮಾಡುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ನೇಹಾ ಬದಲು ಮುಸ್ಲಿಂ ಸಾವಾಗಿದ್ರೆ ಸಿಎಂ ಹೆಲಿಕಾಪ್ಟರ್ ಇಳಿಸ್ತಿದ್ರು: ಯತ್ನಾಳ್

ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುವ ಹಿನ್ನೆಲೆ ಗೋಬ್ಯಾಕ್ ಮೋದಿ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಸದ್ಯ ಪ್ರತಿಭಟನೆ ನಡೆಸಿ ಗದ್ದಲ ಎಬ್ಬಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು

Share This Article