ಪ್ರಜ್ವಲ್ ರೇವಣ್ಣ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ – ಪೋಸ್ಟರ್ ಅಂಟಿಸಿದ್ದವರು ಪೊಲೀಸರ ವಶಕ್ಕೆ

Public TV
1 Min Read

ಬೆಂಗಳೂರು: ಆರೋಪಿ ಪ್ರಜ್ವಲ್ ರೇವಣ್ಣನನ್ನು (Prajwal Revanna) ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ (Poster) ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು. ಇದನ್ನೂ ಓದಿ: ಕ್ಲೀನ್‌ ಚಿಟ್‌ ಕೊಡೋಕೆ ಪ್ರಜ್ವಲ್‌ ಕೇಸನ್ನ ಸಿಬಿಐಗೆ ವಹಿಸಬೇಕಾ: ಎಂ.ಬಿ.ಪಾಟೀಲ್‌ ಪ್ರಶ್ನೆ

ಸದ್ಯ ಪೋಸ್ಟರ್ ಅಂಟಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಹುಮಾನ ಘೋಷಿಸಿ ಅಂಟಿಸಿದ್ದ ಪೋಸ್ಟರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿಎಸ್‌ವೈ

Share This Article