ಸೋಮವಾರ ಮಂಡ್ಯದಲ್ಲಿ ಪವಿತ್ರಾ ಜಯರಾಂ ಅಂತ್ಯಕ್ರಿಯೆ

Public TV
1 Min Read

‘ರಾಧಾ ರಮಣ’ ನಟಿ ಪವಿತ್ರಾ ಜಯರಾಂ (Pavitra Jayaram) ಕಾರು ಅಪಘಾತದಲ್ಲಿ ಇಂದು (ಮೇ 12) ಕೊನೆಯುಸಿರೆಳೆದಿದ್ದಾರೆ. ಮೇ 13ರಂದು ಪವಿತ್ರಾ ಮೃತದೇಹ ಆಂಧ್ರ ಪ್ರದೇಶದ ಕರ್ನೂಲಿನಿಂದ ಮಂಡ್ಯ ತಾಲೂಕಿನ ಹನಕೆರೆ ಗ್ರಾಮಕ್ಕೆ ತಲುಪಲಿದ್ದು, ಅವರ ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು (ಮೇ 12) ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಇದನ್ನೂ ಓದಿ:ತಾಯಂದಿರ ದಿನ ಆಚರಿಸಿದ ಸ್ಯಾಂಡಲ್‌ವುಡ್ ಸ್ಟಾರ್ಸ್

ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ ಫ್ಯಾಮಿಲಿ, ನೀಲಿ, ರಾಧಾ ರಮಣ, ಜೋಕಾಲಿ ಸೀರಿಯಲ್‌ನಲ್ಲಿ ಪವಿತ್ರಾ ನಟಿಸಿದ್ದರು. ತೆಲುಗಿನ ‘ತ್ರಿನಯನಿ’ ಸೀರಿಯಲ್‌ನಲ್ಲಿ ವಿಲನ್ ಆಗಿ ಪವಿತ್ರಾ ಪ್ರೇಕ್ಷಕರ ಗಮನ ಸೆಳೆದಿದ್ದರು.

Share This Article