ಮೈಸೂರಿನಲ್ಲಿ ರಸ್ತೆ ಅಪಘಾತ: ಯೋಧ ದುರ್ಮರಣ

Public TV
1 Min Read

ಮೈಸೂರು: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟ ಘಟನೆ ಸಂಭವಿಸಿದೆ. ಮಹೇಶ್(26) ಮೃತ ದುರ್ಧೈವಿ ಯೋಧರಾಗಿದ್ದು, ಇವರು ಬಿಎಂಶ್ರೀ ನಗರದ ನಿವಾಸಿ ಮಹದೇವು ಎಂಬವರು ಪುತ್ರರಾಗಿದ್ದಾರೆ.

ರಾತ್ರಿ ಸ್ನೇಹಿತರನ್ನು ನೋಡಲೆಂದು ಮಹೇಶ್ ಬೈಕ್ ನಲ್ಲಿ ಮನೆಯಿಂದ ಹೊರಹೋಗಿದ್ದರುಶೀ ವೇಳೆ ಆರ್ ಬಿ.ಐ. ಸಮೀಪದ ರಿಂಗ್ ರಸ್ತೆಯಲ್ಲಿ ಕಾರು ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕೆಲ ತಿಂಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯೋಧ ಮಹೇಶ್ ಕೆಲ ವರ್ಷಗಳ ಹಿಂದೆ ವಾಯುಪಡೆ ಸೇರಿದ್ದರು. ಸದ್ಯ ರಾಜಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಒಂದು ತಿಂಗಳು ರಜೆ ಹಾಕಿ ಜ.15ರಂದು ಮೈಸೂರಿಗೆ ಬಂದಿದ್ದರು. ಫೆ.15ರಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಬೇಕಿತ್ತು.

Share This Article
Leave a Comment

Leave a Reply

Your email address will not be published. Required fields are marked *