ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

By
1 Min Read

ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಮೇ 26) ಒಂದೇ ದಿನ 51 ಜನ ಅಪಘಾತಕ್ಕೆ (Road Accident) ಬಲಿಯಾಗಿದ್ದು, ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ (Road safety) ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಅಪಘಾತದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವಿಗೀಡಾಗಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಸಂಪ್‍ಗೆ ಬಿದ್ದು 2 ವರ್ಷದ ಮಗು ದುರ್ಮರಣ

ಇತ್ತೀಚಿನ ದಿನಗಳಲ್ಲಿ ನಡೆದ ಅಪಘಾತಗಳಲ್ಲಿ ಭಾನುವಾರ ಅತಿ ಹೆಚ್ಚು ಜನರ ಸಾವಾಗಿದೆ. ಅತಿವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತಗಳು ಹೆಚ್ಚಾಗಿವೆ ಎಂದು ಅವರು ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ.

ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭಿಕರ ಅಪಘಾತಗಳು ನಡೆದಿದ್ದವು. ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎನ್ನಲಾಗಿತ್ತು. ಇದನ್ನೂ ಓದಿ: ಕರಾವಳಿಯಲ್ಲಿ ಮಳೆ ಸಂಭವ- ಬೆಂಗಳೂರಿನಲ್ಲಿ ಮುಂದಿನ 3 ದಿನ ಮಳೆಗೆ ಬ್ರೇಕ್

Share This Article