ಮಣಿಪುರದ ಹಿಂಸಾಚಾರ ಪರಿಸ್ಥಿತಿ ಬಳಸಿಕೊಂಡು ಭಯೋತ್ಪಾದನೆ ಹರಡಲು ಯತ್ನ – ಆರೋಪಿ ಅರೆಸ್ಟ್

By
1 Min Read

ಇಂಫಾಲ್: ಮಣಿಪುರದ (Manipur) ಹಿಂಸಾಚಾರ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಭಯೋತ್ಪಾದನೆಯನ್ನು ಹರಡಲು ಯತ್ನಿಸಿದ ಆರೋಪದ ಮೇಲೆ ಎನ್‍ಐಎ (NIA) ಪ್ರಮುಖ ಆರೋಪಿಯನ್ನು ಇಂಫಾಲ್ ವಿಮಾನ ನಿಲ್ದಾಣದಲ್ಲಿ (Imphal Airport) ಬಂಧಿಸಿದೆ.

- Advertisement -

ಬಂಧಿತ ಆರೋಪಿಯನ್ನು ಕುಕಿ ನ್ಯಾಷನಲ್ ಫ್ರಂಟ್-ಮಿಲಿಟರಿ ಕೌನ್ಸಿಲ್ (ಕೆಎನ್‍ಎಫ್-ಎಂಸಿ) ಸದಸ್ಯ ಥೋಂಗ್‍ಮಿಂಥಾಂಗ್ ಹಾಕಿಪ್ ಅಲಿಯಾಸ್ ರೋಜರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಅಲ್ಲದೇ ಆತನ ವಿರುದ್ಧ ಕಳೆದ ವರ್ಷ ಜುಲೈ 19 ರಂದು ಎನ್‍ಐಎ ಸುಮೋಟೋ ಪ್ರಕರಣ ದಾಖಲಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಹಿಮಪಾತ- ಬೆಂಗಳೂರಿನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು 

- Advertisement -

ಮ್ಯಾನ್ಮಾರ್ (Myanmar) ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಝೋಮಿ ದಂಗೆಕೋರರನ್ನು ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಮಾಡುವ ಸಂಚು ರೂಪಿಸಿದ್ದರು. ಈ ಪ್ರದೇಶದಲ್ಲಿನ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಬಳಸಿಕೊಂಡು ಈ ಕೃತ್ಯ ಎಸಗಲು ಮುಂದಾಗಿದ್ದರು. ಅಲ್ಲದೇ ಬಂಧಿತ ಆರೋಪಿ ಹಿಂಸಾಚಾರದ ಸಮಯದಲ್ಲಿ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

- Advertisement -

ಮಣಿಪುರ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಮತ್ತು ಜನರ ಮನಸ್ಸಿನಲ್ಲಿ ಭಯವನ್ನು ಹುಟ್ಟುಹಾಕಲು ಆರೋಪಿ ಮ್ಯಾನ್ಮಾರ್‌ನ ಕುಕಿ ನ್ಯಾಷನಲ್ ಫ್ರಂಟ್-ಬರ್ಮಾ (ಕೆಎನ್‍ಎಫ್-ಬಿ) ದಂಗೆಕೋರ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಹಿಂಸಾಚಾರದಲ್ಲಿ ಬಳಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೂರೈಸಲು ಆರೋಪಿಗಳು ಕೆಎನ್‍ಎಫ್-ಬಿ ನಾಯಕರನ್ನು ಭೇಟಿಯಾಗಿದ್ದ ಎಂದು ಎನ್‍ಐಎ ತನಿಖೆ ವೇಳೆ ತಿಳಿದು ಬಂದಿದೆ.

ಆರೋಪಿ ಭದ್ರತಾ ಪಡೆಗಳ ವಿರುದ್ಧ ಹಲವಾರು ಸಶಸ್ತ್ರ ದಾಳಿಗಳಲ್ಲಿ ಭಾಗವಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಗೆ ಕರೆದು ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

Share This Article