Waqf Row| ಬಿಜೆಪಿ ಅವಧಿಯಲ್ಲಿ ರೈತರಿಗೆ ನೋಟಿಸ್‌ – ಕಾಂಗ್ರೆಸ್‌ ದಾಖಲೆ ಬಿಡುಗಡೆ

Public TV
1 Min Read

ವಿಜಯಪುರ: ವಕ್ಫ್‌ ವಿಚಾರದಲ್ಲಿ (Waqf Row) ಕಾಂಗ್ರೆಸ್‌ ಈಗ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಸಿಎಂ ಬೊಮ್ಮಾಯಿ (CM Basavaraj Bommai) ಅವಧಿಯಲ್ಲಿ ರೈತರಿಗೆ ನೀಡಿದ್ದ ನೋಟಿಸ್‌ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.

ವಿಜಯಪುರ (Vijayapura) ನಗರದ ಮಹಲ್ ಬಾಗಾಯತ್ ಹಳ್ಳಿಯ 10 ರೈತರಿಗೆ 2022 ರ ಸೆಪ್ಟೆಂಬರ್‌ ಮತ್ತು ನವೆಂಬರ್‌ ತಿಂಗಳಿನಲ್ಲಿ ನೀಡಲಾಗಿದ್ದ ವಕ್ಫ್‌ ನೋಟಿಸ್‌ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ಈಗ ವಕ್ಫ್‌ ಆಸ್ತಿ!

ಆನಂದ ಹಡಪದ್, ಅಶೋಕ ಬಣ್ಣದ, ಬಡೈಲ್ ಲಾಹೋರಿ, ಗೋವಿಂದ ಲಿಂಗಸಾ, ಗಿರಮಲ್ಲ ಚನ್ನಾಳ, ಸಂಜಯಕುಮಾರ್ ಜೈನ್, ಮಹಾವೀರ ಶಂಕರಲಾಲ್, ರವಿ ಮಾದರ್, ಬಸಪ್ಪ ಬಣಾರಿ, ಮಾಲಿಂಗಯ್ಯ ಹಿರೇಮಠ ಎಂಬುವರಿಗೆ ಬಸವರಾಜ್ ಬೊಮ್ಮಾಯಿ ಸಿಎಂ‌ ಇದ್ದಾಗ ನೋಟಿಸ್‌ ನೀಡಲಾಗಿತ್ತು. ಇದನ್ನೂ ಓದಿ: ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ಈಗ ವಕ್ಫ್‌ ಆಸ್ತಿ!

ಬಿಜೆಪಿ ನಾಯಕರು ರಾಜಕೀಯಕ್ಕಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕ ರಾಜು ಆಲಗೂರ್ ಕಿಡಿಕಾರಿದ್ದಾರೆ.

 

Share This Article