1,000 ಕೆಜಿ ಗಂಧದ ಕಟ್ಟಿಗೆಯಲ್ಲಿ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ: ಗಣಿಗ ರವಿ

By
1 Min Read

ಬೆಂಗಳೂರು: ಎಸ್‌ಎಂ ಕೃಷ್ಣ (SM Krishna) ಸಿಎಂ ಆಗಿದ್ದಾಗ ರೈತರು ಗಂಧದ ಮರವನ್ನು ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದರು. ಈ ಹಿನ್ನೆಲೆ 1,000 ಕೆಜಿ ಗಂಧದ (Sandalwood) ಕಟ್ಟಿಗೆಯಲ್ಲಿ ಎಸ್‌ಎಂ ಕೃಷ್ಣ ಅವರ ಅಂತಿಮ ಸಂಸ್ಕಾರ ನೇರವೆರಿಸಲಾಗುತ್ತದೆ ಎಂದು ಶಾಸಕ ಗಣಿಗ ರವಿ (Ganiga Ravi) ತಿಳಿಸಿದ್ದಾರೆ.

ಎಸ್‌ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದ ನೂತನ ಹೆರಿಗೆ ಆಸ್ಪತ್ರೆಗೆ ಎಸ್‌ಎಂಕೆ ಹೆಸರು ಇಡಲಾಗುತ್ತದೆ. ಬಿ ಹಸೂರು ಕಾಲೋನಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಎಸ್ ಎಂಕೆ ಹೆಸರು ಇಡಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಎಸ್‌ಎಂ ಕೃಷ್ಣ ಸಜ್ಜನಿಕೆ, ಸಭ್ಯತೆ, ಸದಾಚಾರದ ರಾಜಕಾರಣಿ: ಪೇಜಾವರ ಶ್ರೀ

ಇಷ್ಟು ಮಾತ್ರವಲ್ಲದೇ ಮಂಡ್ಯದಲ್ಲಿ ಒಂದು ಪಾರ್ಕಿಗೆ ಎಸ್‌ಎಂ ಕೃಷ್ಣ ಅವರ ಹೆಸರು ಇಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್‌

Share This Article