ವಾರಣಾಸಿ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಸಾಯಿ ಪಲ್ಲವಿ

Public TV
1 Min Read

ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಾರಣಾಸಿಗೆ ಭೇಟಿ ನೀಡಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪತ್ನಿ ಅವಿವ ಜೊತೆ ಅಭಿಷೇಕ್ ಅಂಬರೀಶ್ ಮಸ್ತ್ ಫೋಟೋಶೂಟ್

ತೆಲುಗು ಮತ್ತು ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಾಯಿ ಪಲ್ಲವಿ ಇಂದು (ಡಿ.23) ವಾರಣಾಸಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವರ ಸನ್ನಿಧಿಯಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ. ನಟಿ ವಾರಣಾಸಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

ಅಂದಹಾಗೆ, ನಾಗಚೈತನ್ಯ ಜೊತೆಗಿನ ‘ತಾಂಡೇಲ್’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ರಣ್‌ಬೀರ್ ಕಪೂರ್‌ಗೆ ಸೀತೆಯಾಗಿ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲಿವಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಯಶ್ ಅಬ್ಬರಿಸಲಿದ್ದಾರೆ.

Share This Article