ಅಣ್ಣ-ತಮ್ಮ ಬೇರೆ ಆಗಿದ್ದೀವಿ ಅಂತ ಯಾರು ಹೇಳಿದ್ದು?; ದರ್ಶನ್‌ ಜೊತೆ ಮನಸ್ತಾಪ ಇಲ್ಲ ಎಂದ ದಿನಕರ್‌ ತೂಗುದೀಪ

Public TV
1 Min Read

– ದರ್ಶನ್‌ಗೆ ನಾನು ಸಿನಿಮಾ ಮಾಡೋದು ಕನ್ಫರ್ಮ್‌

ಣ್ಣ ದರ್ಶನ್ (Darshan) ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನಮುರಿದ್ದಾರೆ ಸಹೋದರ ದಿನಕರ್ ತೂಗುದೀಪ (Dinakar Thoogudeepa). ಅಣ್ಣ-ತಮ್ಮ ಬೇರೆ ಆಗಿದ್ದೀವಿ ಅಂತ ಯಾರು ಹೇಳಿದ್ದು? ಫ್ಯಾಮಿಲಿಯಲ್ಲಿ ಚಿಕ್ಕಪುಟ್ಟ ಮನಸ್ತಾಪವಿತ್ತು ಅಷ್ಟೆ. ಹಾಗಂತ ದೂರ ಆಗೋ ಮಾತಿಲ್ಲ ಎಂದು ದರ್ಶನ್‌ ಜೊತೆಗೆ ಯಾವುದೇ ಮನಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ರಾಯಲ್’‌ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನಕರ್‌, ಗಂಡ-ಹೆಂಡತಿ ಮಧ್ಯೆ ಹೇಗೆ ಜಗಳವೋ ಹಾಗೆ ಅಣ್ಣ-ತಮ್ಮ ಅಂದ್ಮೇಲೆ ಇದ್ದೆ ಇರುತ್ತೆ. ಮಾತಾಡ್ತಾನೇ ಇರ್ತೀವಿ. ತಿಂಗಳಿಗೊಮ್ಮೆ ಆಗೊಮ್ಮೆ ಈಗೊಮ್ಮೆ. ಅತ್ತಿಗೆ ಜೊತೆ ಯಾವಾಗಲೂ ಕಾಂಟೆಕ್ಟ್‌ನಲ್ಲಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಣಬೀರ್ ಕಪೂರ್-ದೀಪಿಕಾ ಪಡುಕೋಣೆಯ ‘ಯೇ ಜವಾನಿ ಹೈ ದೀವಾನಿ’ ಜ.3ಕ್ಕೆ ರೀ-ರಿಲೀಸ್

ಈ ಸಿನಿಮಾಗೆ ದರ್ಶನ್ ಸಾಥ್ ಕೊಡಬಹುದು. ಬೆನ್ನುನೋವಿದೆ.. ಟ್ರೀಟ್ಮೆಂಟ್‌ಗಾಗಿ ಮೈಸೂರಿಗೆ ಹೋಗಿದ್ದೀವಿ. ಅಜಯ್ ಹೆಗ್ಡೆ ಎರಡು ಬಾರಿ ಟ್ರೀಟ್ಮೆಂಟ್ ಮಾಡಿದಾರೆ ಹಾಗಾಗಿ ಅಲ್ಲೇ ಟ್ರೀಟ್ಮೆಂಟ್ ಎಂದರು.

ದರ್ಶನ್‌ಗೆ ನಾನು ಸಿನಿಮಾ ಮಾಡೋದು ಕನ್ಫರ್ಮ್. ನಿರ್ಮಾಪಕರ ಲಿಸ್ಟ್ ದರ್ಶನ್ ಕಡೆಗಿದೆ. ದರ್ಶನ್‌ಗೆ ಸಿನಿಮಾ ಮಾಡ್ಬೇಕು ಅಂದಾಗ ಕಥೆ ಕೇಳಲ್ಲ. ದರ್ಶನ್ ನನಗಿಂತ ಇಂಡಸ್ಟ್ರಿಯಲ್ಲಿ ಸೀನಿಯರ್ ಎಂದು ಅಣ್ಣನ ಕುರಿತು ಮಾತನಾಡಿದರು. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – `ಮುದ್ದುಲಕ್ಷ್ಮಿ’ ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ

Share This Article