ಮೈಸೂರು| ಹೊಸ ವರ್ಷದಂದು ಕಟ್‌ ಮಾಡಿ ಉಳಿದಿದ್ದ ಕೇಕ್ ತಿಂದು 30 ಮಕ್ಕಳು ಅಸ್ವಸ್ಥ

Public TV
1 Min Read

ಮೈಸೂರು: ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥವಾದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರಿನ ಬೋಳನಹಳ್ಳಿಯ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.

ಹೊಸ ವರ್ಷದ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕ್ ಅನ್ನು ಎರಡು ದಿನದ ನಂತರ ಮಕ್ಕಳು ತಿಂದಿದ್ದಾರೆಂದು ಹೇಳಲಾಗಿದೆ. ಕೇಕ್ ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಬೋಳನಹಳ್ಳಿಯ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರಿನ ಕೋಟೆ ದರ್ಗಾ ಜಾಗದಲ್ಲಿ ಕಾಮಗಾರಿಗೆ ಸ್ಥಳೀಯರ ವಿರೋಧ – ನಗರದಲ್ಲಿ ಬೂದಿ ಮುಚ್ಚಿದ ಕೆಂಡ

ಚಿಕಿತ್ಸೆ ನಂತರ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಕೇಕ್ ತಿಂದು ಅಸ್ವಸ್ಥರಾಗಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ನಿರ್ಲಕ್ಷ್ಯತೆ ವಹಿಸಿದ ಶಾಲಾ ಮುಖ್ಯೋಪಾದ್ಯಾಯ ಅಶ್ವತ್ಥ್‌ರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೆಚ್‌ಡಿಕೆ ಅಪ್ಪಟ ಅಭಿಮಾನಿ, ಜೆಡಿಎಸ್ ಮುಖಂಡನ ಭೀಕರ ಹತ್ಯೆ

Share This Article