ಬಾಗಲಕೋಟೆ ಡಿಸಿ ಕಚೇರಿ ಎದುರು ಹಾವು ಪ್ರತ್ಯಕ್ಷ – ಹೌಹಾರಿದ ನೌಕರರು

By
1 Min Read

ಬಾಗಲಕೋಟೆ: ಜಿಲ್ಲಾಧಿಕಾರಿಗಳ ಕಚೇರಿ (District Headquarters) ಎದುರೇ ಹಾವು (Snake) ಕಾಣಿಸಿಕೊಂಡು ಕೆಲಹೊತ್ತು ಅಲ್ಲಿಯ ನೌಕರರನ್ನ ಭಯಭೀತಗೊಳಿಸಿದ್ದ ಘಟನೆ ಬಾಗಲಕೋಟೆ (Bagalkote) ಜಿಲ್ಲಾಡಳಿತ ಭವನದಲ್ಲಿ ನಡೆದಿದೆ.

- Advertisement -

ಎಂದಿನಂತೆ ನೌಕರರು ತಮ್ಮ ಕೆಲಸಕ್ಕೆ ಹಾಜರಾಗುವ ವೇಳೆ ಹಾವು ಕಚೇರಿ ಎದುರು ಹರಿದು ಮುಂದೆ ಹೊರಟಿತ್ತು.ನಂತರ ಜಿಲ್ಲಾಡಳಿತ ಸಿಬ್ಬಂದಿ ಸ್ನೇಕ್ ಕ್ಯಾಚರ್ ರಾಜುಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ರಾಜು ಹಾವನ್ನು ರಕ್ಷಣೆ ಮಾಡಿದರು. ಇದನ್ನೂ ಓದಿ: ಪೊಲೀಸ್‌ ಜೀಪನ್ನೇ ಪಲ್ಟಿ ಮಾಡಿದ್ದ ಹುಬ್ಬಳ್ಳಿ ಗಲಭೆಕೋರರು ಅಮಾಯಕರೇ? – ಕೇಸ್ ವಾಪಸ್‌ಗೆ ಸರ್ಕಾರದ ಅರ್ಜಿ

- Advertisement -

- Advertisement -

ಇದು ಮಂಡಲದ ಹಾವಾಗಿದ್ದು ವಿಷಕಾರಿ ಅಲ್ಲ. ಈ ಹಾವು ಕಚ್ಚಿದರೆ ಜನರು ಸಾಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿಗೆ ಹಾವಿನ ಜಾತಿಯ ಬಗ್ಗೆ ರಾಜು ಅರಿವು ಮೂಡಿಸಿದರು.

- Advertisement -

ಸುಮಾರು ಎರಡು ಅಡಿಯ ಉದ್ದದ ಹಾವು ಇದಾಗಿದ್ದು, ಇದು ಮನೆಯ ಗೋಡೆ ಹಾಗೂ ಸಂದಿಗೊಂದಿಗಳಲ್ಲಿ ಸಂಚರಿಸುತ್ತದೆ. ಅಡಗಿರುವ ಇಲಿಯನ್ನು ಬೇಟೆಯಾಡುತ್ತದೆ. ಆಹಾರ ಅರಸುತ್ತಾ ಡಿಸಿ ಕಚೇರಿಗೆ ಬಂದಿರಬಹುದು ಎಂದು ರಾಜು ಹೇಳಿದರು.

 

Share This Article