ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

Public TV
1 Min Read

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು ದೂರವಾಣಿ ಮತ್ತು ವಾಟ್ಸಪ್ ಮೂಲಕ ಬೆದರಿಕೆಗಳು ಬರುತ್ತಿವೆ. ಈ ಬೆದರಿಕೆಗಳು ಲೀಡರ್ ಟೈಟಲ್ ವಿವಾದದ ನಂತರ ಬರುತ್ತಿವೆ. ಅಲ್ಲದೇ ವಾಟ್ಸಪ್ ಗ್ರೂಪ್ ಮಾಡಿ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿತ್ತು. ಆದ್ರೆ ಕ್ರಮ ಕೈಗೊಳ್ಳಲು ಚಲನಚಿತ್ರ ವಾಣಿಜ್ಯ ಮಂಡಳಿ ಹಿಂದೇಟು ಹಾಕುತ್ತಿದೆ ಅಂತಾ ದೂರಿನಲ್ಲಿ ಹೇಳಿದ್ದಾರೆ.

ಇಂತಹವರ ಬಗ್ಗೆ ಕ್ರಮಕೈಗೊಂಡು ರಕ್ಷಣೆ ನೀಡುವಂತೆ ಮನವಿ ಮಾಡಿದ ನಿರ್ದೇಶಕ ರಮೇಶ್ ನಗರ ಪೊಲೀಸ್ ಆಯುಕ್ತರ ಜೊತೆ ಮನವಿ ಮಾಡಿದ್ದಾರೆ. ವಾಟ್ಸಪ್ ಮಾಡಿದ ಗ್ರೂಪಲ್ಲಿ ಶಿವಣ್ಣ ಫೋಟೋ ಡಿಪಿ ಹಾಕಿಕೊಂಡು ಕಿಡಿಕೇಡಿಗಳು ಬೆದರಿಕೆ ಹಾಕುತ್ತಿದ್ದಾರೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಲೀಡರ್ ಟೈಟಲ್ ಯಾರದ್ದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿತು

Share This Article
Leave a Comment

Leave a Reply

Your email address will not be published. Required fields are marked *