ಬಸ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

Public TV
1 Min Read

ಗದಗ: ಸ್ಕೂಟರ್ ಅತೀ ವೇಗದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಸರ್ಕಾರಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮುಳಗುಂದ (Mulagund)  ನಾಕಾ ಬಳಿ ಬಸ್ ಡಿಪೋ ಎದುರು ನಡೆದಿದೆ.

ಗದಗ (Gadag) ತಾಲೂಕಿನ ಬೆನಕನಕೊಪ್ಪ ಗ್ರಾಮದ ನಿವಾಸಿ ಈರಪ್ಪ ಕಣಗಿನಹಾಳ (50) ಮೃತ ಸವಾರ. ಇದನ್ನೂ ಓದಿ: ಫೆಸ್ಟಿಸೈಡ್ ಶಾಪ್ ಮಾಲೀಕನ ಯಡವಟ್ಟಿಗೆ ಹೂದೋಟವೇ ಸುಟ್ಟು ಕರಕಲು – ರೈತನಿಗೆ ಭಾರೀ ನಷ್ಟ

ಈರಪ್ಪ ಅವರು ಗದಗ ಮಾರ್ಕೆಟ್ ಕಡೆಯಿಂದ ಮುಳಗುಂದ ನಾಕಾ ಕಡೆಗೆ ಸ್ಕೂಟರ್‌ನಲ್ಲಿ ಬರುತ್ತಿದ್ದರು. ಏಕಾಏಕಿ ಸ್ಕೂಟರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಹಿಂದಿನಿAದ ಬಂದ ಬಸ್ ಅವರ ತಲೆ ಮೇಲೆ ಹರಿದಿದೆ. ಇದನ್ನೂ ಓದಿ: ಫ್ಯಾಮಿಲಿ ಜೊತೆ ಹೋಳಿ ಹಬ್ಬ ಆಚರಿಸಿದ ಕತ್ರಿನಾ ಕೈಫ್

ಬಸ್ ಗದಗದಿಂದ ಹಾನಗಲ್ ಕಡೆ ಹೊರಟಿದ್ದು, ಬಸ್ ಹರಿದ ಪರಿಣಾಮ ತಲೆ ಭಾಗ ಗುರುತು ಸಿಗದಂತೆ ಛಿದ್ರ ಛಿದ್ರವಾಗಿದೆ. ಈ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ರನ್ಯಾಗೇ ಜೈಲೇ ಗತಿ -ಜಾಮೀನು ಅರ್ಜಿ ವಜಾ

ಗದಗ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article