ಯತ್ನಾಳ್ ಉಚ್ಚಾಟನೆ ದುಃಖ ತಂದಿದೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುವೆ: ಬೆಲ್ಲದ್

By
1 Min Read

ಹುಬ್ಬಳ್ಳಿ: ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್‌ರನ್ನ (Basanagouda Patil Yatnal) ಉಚ್ಚಾಟನೆ ಮಾಡಿರುವುದು ಬಹಳಷ್ಟು ದುಃಖ ತಂದಿದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದರು.

- Advertisement -

ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ 6 ವರ್ಷ ಹೈಕಮಾಂಡ್ ಉಚ್ಚಾಟನೆ ಮಾಡಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದರು. ಯತ್ನಾಳ್ ಒಬ್ಬ ಪಕ್ಷದ ಹಿರಿಯ ಜನಪ್ರಿಯ ನಾಯಕರು. ಅವರು ಪಕ್ಷದಿಂದ ದೂರವಾಗುತ್ತಿರುವುದು ನನಗೆ ದುಃಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

- Advertisement -

- Advertisement -

ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ತಲೆ ಬಾಗುತ್ತೇನೆ. ಪಕ್ಷದಲ್ಲಿ ಮುಂದೆ ಎಲ್ಲವೂ ಸರಿಯಾಗುತ್ತದೆ ಎನ್ನುವ ಭರವಸೆ ನನಗಿದೆ. ಯತ್ನಾಳ್ ಅವರಿಗೆ ಕೇಂದ್ರದ ಮಂತ್ರಿಯಾಗಿ, ಶಾಸಕರಾಗಿ ಸಾಕಷ್ಟು ಅನುಭವವಿದೆ. ಅವರು ಏನೇ ವಿಷಯವಿದ್ದರೂ ನೇರವಾಗಿಯೇ ಹೇಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್

- Advertisement -

Share This Article