ರೇಣುಕಾಸ್ವಾಮಿ ಕೊಲೆ ಕೇಸ್‌: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ

Public TV
1 Min Read

ನವದೆಹಲಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮತ್ತೆ ಮೇ 14ಕ್ಕೆ ಮುಂದೂಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಪ್ರಕರಣದ ಇತರೇ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು (Bengaluru Police) ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್‌ನ ನ್ಯಾ.ಜೆ.ಬಿ ಪಾರ್ದಿವಾಲ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಮೇ 14ಕ್ಕೆ ವಿಚಾರಣೆಯನ್ನು ಮುಂದೂಡಿತು.  ಇದನ್ನೂ ಓದಿ: ಸಂಸತ್ತೇ ಸರ್ವೋಚ್ಚ, ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್‌ ಮಾಸ್ಟರ್ಸ್‌: ಧನಕರ್‌

Actor Darshan

ರಾಜ್ಯ ಸರ್ಕಾರದ ಪರ ಸಿದಾರ್ಥ ಲೂಥ್ರಾ ವಾದ ಮಂಡಿಸಿದ್ರೆ, ಕೊಲೆ ಆರೋಪಿ ದರ್ಶನ್‌ ಪರ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಿದರು. ಇದನ್ನೂ ಓದಿ: ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

131 ದಿನಗಳ ಜೈಲುವಾಸದ ನಂತರ ನಟ ದರ್ಶನ್ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಕಳೆದ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.  ಇದನ್ನೂ ಓದಿ: ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಅನುಮೋದನೆ ಅಗತ್ಯವಿಲ್ಲ – ಸುಪ್ರೀಂ

Share This Article