ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

By
1 Min Read

ಅಹಮದಾಬಾದ್: ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ (Girija Vyas) ಗುರುವಾರ ಅಹಮದಾಬಾದ್‌ನಲ್ಲಿ (Ahmedabad) ನಿಧನರಾಗಿದ್ದಾರೆ.

- Advertisement -

ಗಿರಿಜಾ ಅವರ ನಿಧನದ ಕುರಿತು ಸಹೋದರ ಗೋಪಾಲ್ ಶರ್ಮಾ ಖಚಿತಪಡಿಸಿದ್ದಾರೆ. ಉದಯಪುರದ ತಮ್ಮ ಮನೆಯಲ್ಲಿ ಏ.2ರಂದು ಗಿರಿಜಾ ವ್ಯಾಸ್ ದೇವರಿಗೆ ಆರತಿ ಮಾಡುವ ವೇಳೆ ಅವರ ಉಡುಪಿಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಾಗಿತ್ತು. ಈ ಹಿನ್ನೆಲೆ ಗಿರಿಜಾ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಗಿರಿಜಾ ವ್ಯಾಸ್ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

- Advertisement -

ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥೆಯೂ ಆಗಿದ್ದ ಗಿರಿಜಾ ವ್ಯಾಸ್ ರಾಜ್ಯ ಮತ್ತು ಕೇಂದ್ರ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು. ಇದನ್ನೂ ಓದಿ: ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

- Advertisement -

- Advertisement -

1991ರಲ್ಲಿ ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದ ಗಿರಿಜಾ, ಅಂದಿನ ಪ್ರಧಾನಿಯಾಗಿದ್ದ ನರಸಿಂಹ ರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಕೇಮದ್ರ ಸಚಿವೆಯಾಗಿದ್ದರು. ಇದನ್ನೂ ಓದಿ: Bengaluru | ಮಳೆಗೆ ಆಟೋದ ಮೇಲೆ ಬಿದ್ದ ಮರ – ಚಾಲಕ ಸಾವು

Share This Article