ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

By
1 Min Read

ಚಾಮರಾಜನಗರ: ಮುಂಬರುವ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಎದುರಾಗಲಿದೆ ಎಂದು ಚಾಮರಾಜನಗರದ (Chamarajanagara) ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದರು.

- Advertisement -

ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳಿಗೆ ಮೇವು ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ (K Venkatesh) ಅವರು ನಡೆಸಿದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

- Advertisement -

- Advertisement -

ಸದ್ಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಮುಂಬರುವ ದಿನಗಳಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದಲ್ಲಿ ಜಿಲ್ಲೆಯ 154 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ವಿವರಿಸಿದರು. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

- Advertisement -

ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು ಅಗತ್ಯ ಇರುವ ಕಡೆ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಹಾಗೂ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Share This Article