ಉತ್ತರ ಕನ್ನಡದಲ್ಲಿ ಭಾರೀ ಮಳೆ – ಗುಡ್ಡ ಕುಸಿತ, ರಸ್ತೆಗುರುಳಿದ ಬೃಹತ್ ಬಂಡೆ

By
1 Min Read

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು (Rain), ಕುಮಟಾ (Kumta) ತಾಲೂಕಿನ ಮುಸುಗುಪ್ಪ ಬಳಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಗುಡ್ಡ ಕುಸಿದಿದೆ.

- Advertisement -

ಗುಡ್ಡ ಕುಸಿತದಿಂದ (Landslide ) ರಸ್ತೆಗೆ ಭಾರೀ ಗಾತ್ರದ ಬಂಡೆಗಲ್ಲು ಉರುಳಿ ಬಂದಿದೆ. ಪರಿಣಾಮ ಮೂರೂರು-ಹರಕಡೆ ನಡುವಿನ ರಸ್ತೆ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಹನ ಸವಾರರಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋಯ್ತು ಹೈವೇ| ಕುಮಟಾ – ಶಿರಸಿ ಸಂಪರ್ಕ ಕಡಿತ

- Advertisement -

- Advertisement -

ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆಗೆ (Rain) ದೇವಿಮನೆ ಘಟ್ಟದಲ್ಲಿ (Devimane Ghat) ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿತ್ತು. ಇದರಿಂದ ಕುಮಟಾ – ಶಿರಸಿ (Kumta- Sirsi) ಸಂಪರ್ಕ ಕಡಿತಗೊಂಡಿತ್ತು. ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು.

- Advertisement -

ಮುಂಗಾರಿನ ಆರಂಭದಲ್ಲೇ ಮಳೆ ಅಬ್ಬರಿಸುತ್ತಿದ್ದು, ರಾಜ್ಯದ ನಾನ ಕಡೆ ಅವಾಂತರಗಳು ಸೃಷ್ಟಿಯಾಗುತ್ತಿವೆ. ಆರಂಭದಲ್ಲೇ ಹೀಗಾದರೆ, ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಎಂಬ ಆತಂಕ ಸಹ ಜನರನ್ನು ಕಾಡುತ್ತಿದೆ. ಇದನ್ನೂ ಓದಿ: ಧಾರಾಕಾರ ಮಳೆ – ಹೇಮಾವತಿ ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ

 

Share This Article