ದ.ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ಇಂದು ರಜೆ

Public TV
1 Min Read

– ಉತ್ತರ ಕನ್ನಡದಲ್ಲಿ ಅಂಗನವಾಡಿಗಳಿಗೆ ರಜೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಯಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮೇ 30ರಂದು ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆ ಆರ್ಭಟ ಮುಂದುವರಿದಿದೆ.ಇದನ್ನೂ ಓದಿ: ಕಲಬುರಗಿಯಲ್ಲಿ ಉತ್ತಮ‌ ಮಳೆ – ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

ಉತ್ತರ ಕನ್ನಡದಲ್ಲಿ ಅಂಗನವಾಡಿಗಳಿಗೆ ರಜೆ:
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು (ಮೇ 30) ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ 24 ಗಂಟೆಯಲ್ಲಿ 150 ಮಿ.ಮೀಗೂ ಹೆಚ್ಚು ಮಳೆಯಾಗಿದ್ದು, ಹೊನ್ನಾವರ, ಭಟ್ಕಳದಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಹೊನ್ನಾವರದ ಹೊಸಕುಳಿಯಲ್ಲಿ 112 ಮಿ.ಮೀ ಮಳೆಯಾದರೆ, ಭಟ್ಕಳದ ಮಾರುಕೇರಿಯಲ್ಲಿ 150 ಮಿ.ಮೀ ಮಳೆ ದಾಖಲಾಗಿದೆ. ಹೀಗಾಗಿ ಇಂದು ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಮಲೆನಾಡಲ್ಲಿ ಮಳೆ ನಿಂತ್ರೂ ನಿಲ್ಲದ ಅವಾಂತರ – 80 ವರ್ಷದ ಹಳೇ ಶಾಲಾ ಕಟ್ಟಡ ಕುಸಿತ

Share This Article