– ನನಗೆ ಸಿಕ್ಕವಳು ಬೇರೆ ಯಾರಿಗೂ ಸಿಗಬಾರ್ದು ಅಂತ ಸೈಕೋ ವರ್ತನೆ
– ಅಂದಕ್ಕೂ ಐಶ್ವರ್ಯಕ್ಕೂ ಕಡಿಮೆಯಿಲ್ಲದ ಸುಂದ್ರಿ ಟೆಕ್ಕಿ ಪ್ರೀತಿ ಆಸೆಗೆ ಬಿದ್ದು ಹೆಣವಾದ್ಲು
ಬೆಂಗಳೂರು: ಸೌಂದರ್ಯದ ಖನಿ ಅವಳು… ರೂಪ ಲಾವಣ್ಯದಲ್ಲಾಗಲಿ.. ಅಂದ – ಐಶ್ವರ್ಯದಲ್ಲಾಗಲಿ ಯಾರಿಗೇನು ಕಡಿಮೆ ಇರಲಿಲ್ಲ. ಗಂಡ ಇಬ್ಬರು ಹೆಣ್ಣುಮಕ್ಕಳಿದ್ದ ಸುಂದರ ಸಂಸಾರದಲ್ಲಿ ಯುವಕನೊಂದಿಗೆ ಪ್ರೇಮ, ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಪ್ರಿಯಕರನಿಂದಲೇ (Lover) ಮಂಚದ ಮೇಲೆ ಹೆಣವಾದಳು ಸುಂದ್ರಿ.. ಏನಿದು ಥ್ರಿಲ್ಲಿಂಗ್ ಸ್ಟೋರಿ ಅಂತೀರಾ ಮುಂದೆ ಓದಿ…
ಹೌದು… ಬೆಂಗಳೂರಿನ (Bengaluru) ಪೂರ್ಣ ಪ್ರಜ್ಞಾ ಲೇಔಟ್ನಲ್ಲಿ ಓಯೋ ರೂಮಿನಲ್ಲಿ ಹತ್ಯೆಗೀಡಾದ ಗೃಹಿಣಿ ಹರಿಣಿ ವಯಸ್ಸು 35 ಆದ್ರೂ ನೋಡೋಕೆ ರೂಪವತಿ. ಮನೆ ಕಡೆಯೂ ಸಾಕಷ್ಟು ಸ್ಥಿತಿವಂತರಾಗಿದ್ರು. ಕೋಟಿ ಕೋಟಿ ಆಸ್ತಿ ಇರೋ ಈ ಹರಿಣಿಗೆ ಊರ ಜಾತ್ರೆಯಲ್ಲಿ 25 ವರ್ಷದ ಟೆಕ್ಕಿ ಯಶಸ್ ಪರಿಚಯವಾಗಿದ್ದ. ಇದೇ ವೇಳೆ ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿತ್ತು. ಜಾತ್ರೆಯಲ್ಲೇ ನಂಬರ್ ಎಕ್ಸ್ಚೇಂಜ್ ಮಾಡಿಕೊಂಡು ಚಾಟಿಂಗ್, ಡೇಟಿಂಗ್ ಶುರು ಮಾಡಿದ್ರು. ಇವರಿಬ್ಬರ ಪ್ರೀತಿ (Love) ಮಂಚದವರೆಗೂ ತಲುಪಿತ್ತು. ಹೆಮ್ಮಿಗೆಪುರದ ಹರಿಣಿಯ ಗಂಡ ಸ್ಥಳೀಯ ಜಮಿನ್ದಾರ. ಹಣಕಾಸಿಗೆ ಕೊರತೆ ಇರ್ಲಿಲ್ಲ. ಇಬ್ಬರು ಹೆಣ್ಣು ಮಕ್ಕಳನ್ನ ಓದಿಸಿಕೊಂಡು ಹೆಂಡತಿಯನ್ನ ಚೆನ್ನಾಗಿ ನೋಡಿಕೊಂಡಿದ್ದನಂತೆ. ಇತ್ತಿಚೇಗೆ ದೊಡ್ಡ ಮನೆ ಕಟ್ಟಲು ಪಾಯ ಪೂಜೆ ಸಹ ಮಾಡಿದ್ರಂತೆ. ಇದನ್ನೂ ಓದಿ: ಹೆಂಡತಿ ಮಾತು ಕೇಳಿ ನನ್ನ ಮಗ ಹನಿಮೂನ್ಗೆ 10 ಲಕ್ಷ ಮೌಲ್ಯದ ಆಭರಣ ಹಾಕ್ಕೊಂಡು ಹೋಗಿದ್ದ: ಸೊಸೆಯ ಪ್ಲ್ಯಾನ್ ಬಗ್ಗೆ ಬಿಚ್ಚಿಟ್ಟ ಅತ್ತೆ
ಸಿಕ್ಕ ಕೂಡಲೇ ಮುಗಿಸಿಬಿಡಬೇಕೆಂದು ಸ್ಕೆಚ್
ಹೀಗಿರುವಾಗಲೇ ಪತ್ನಿ ಹರಿಣಿ ಹಾಗೂ ಯಶಸ್ ನಡುವಿನ ಅನೈತಿಕ ಸಂಬಂಧ ಗಂಡನಿಗೆ ಗೊತ್ತಾಗಿದೆ. ಗಂಡ ಪತ್ನಿಗೆ ಬುದ್ಧಿ ಹೇಳಿ ಹರಿಣಿಯ ಫೋನ್ ಕೂಡ ಕಿತ್ಕೊಂಡು ಮನೆಯಲ್ಲೇ ಕೂಡಿ ಹಾಕಿದ್ದರಂತೆ ಪತಿ ದಾಸೇಗೌಡ. ಇದಾದ ನಂತರ ಪತ್ನಿ ಸರಿ ಹೋಗ್ತಾಳೆ ಅಂತ ಹೊರಗಡೆ ಬಿಟ್ಟಿದ್ದಾನೆ. ಈ ವೇಳೆ ಹರಿಣಿ ತನ್ನ ಬಾಯ್ಫ್ರೆಂಡ್ ಯಶಸ್ನ ಮತ್ತೆ ಸಂಪರ್ಕಿಸಿದ್ದಾಳೆ. ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತಾಗಿದ್ದ ಯಶಸ್, ಹರಿಣಿ ಸಿಕ್ಕರೇ ಸಾಯಿಸಲು ನಿರ್ಧಾರ ಮಾಡಿದ್ನಂತೆ. ಕೊಲೆ ಮಾಡೋ ಉದ್ದೇಶದಿಂದ ಚಾಕು ಕೂಡ ಖರೀದಿ ಮಾಡಿದ್ನಂತೆ. ಇದನ್ನೂ ಓದಿ: Bengaluru | ಅನೈತಿಕ ಸಂಬಂಧ ಆರೋಪ – ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್ ಪ್ರೇಮಿ
ಎಲ್ಲಾ ಮುಗಿದ್ಮೇಲೆ ಸೈಕೋ ವರ್ತನೆ ತಾಳಿದ್ದ ಟೆಕ್ಕಿ
ಇದೇ ಸಮಯಕ್ಕೆ ಹರಿಣಿ ಯಶಸ್ಗೆ ಕಾಲ್ ಮಾಡಿದ್ದು ಇಬ್ಬರು ಓಯೋ ರೂಮ್ನಲ್ಲಿ ಸೇರೋದಾಗಿ ಮಾತು ಕತೆ ನಡೆಸಿದ್ದಾರೆ. ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯ ಓಯೊ ರೂಂ ನಲ್ಲಿ (Oyo Room) ಕಳೆದ ಶುಕ್ರವಾರ ಇಬ್ಬರೂ ಸೇರಿದ್ದಾರೆ. ಲೈಗಿಂಕ ಸಂಪರ್ಕ ಮುಗಿಸಿದ ಬಳಿಕ ಯಶಸ್ ಸೈಕೋ ವರ್ತನೆ ತಾಳಿದ್ದಾನೆ. ನನಗೆ ಸಿಕ್ಕವಳು ಬೇರೆ ಯಾರಿಗೂ ಸಿಗಬಾರದು ಅಂತ ಮೊದಲೇ ಪ್ಲಾನ್ ಮಾಡಿದಂತೆ ಚಾಕುನಿಂದ ಬರ್ಬರವಾಗಿ ಇರಿದು ಕೊಂದೇಬಿಟ್ಟಿದ್ದಾನೆ. ನಂತರ ಟೆಕ್ಕಿ ತಾನೂ ಕೂಡ ಎದೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಆದ್ರೆ ನೋವಾಯ್ತು ಅಂತ ಚಾಕು ಅಲ್ಲೆ ಬಿಟ್ಟು ನೇರವಾಗಿ ಕೆಂಗೇರಿ ಠಾಣೆಗೆ ಹೋಗಿ ಕೊಲೆ ವಿಚಾರ ಹೇಳಿದ್ದಾನೆ.
ಕೊನೆಗೆ ಕೆಂಗೇರಿ ಪೊಲೀಸ್ರು ಕೊಲೆ ನಡೆದ ಸ್ಥಳ ಸುಬ್ರಹ್ಮಣ್ಯಪುರ ಠಾಣಾವ್ಯಾಪ್ತಿಗೆ ಬರೋದಾಗಿ ಟೆಕ್ಕಿ ಯಶಸ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ ಮರ್ಡರ್ | ನನ್ನ ಮಗಳು 100% ಮುಗ್ಧೆ – CBI ತನಿಖೆಗಾಗಿ ಅಮಿತ್ ಶಾಗೆ ಮನವಿ ಮಾಡ್ತೇನೆ: ಸೋನಮ್ ತಂದೆ