ಮಡಿಕೇರಿ: ಅರಣ್ಯ ಇಲಾಖೆಯ (Forest Department) ಜೀಪ್ ಚಾಲಕ (ಗುತ್ತಿಗೆ ನೌಕರ) ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ನೀಡಿದ ದೂರಿನ ಅನ್ವಯ ಇಬ್ಬರು ಅಧಿಕಾರಿಗಳು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೊಡಗಿನ (Kodagu) ಕಳ್ಳಹಳ್ಳ ಅರಣ್ಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ರಾಜಶೇಖರ್, ಡಿಆರ್ಎಫ್ ವೇಣುಗೋಪಾಲ್, ಅರಣ್ಯ ಸಿಬ್ಬಂದಿ ಶಿವು, ಅಭಿ ಹಾಗೂ ಗುತ್ತಿಗೆದಾರ ಪ್ರಕಾಶ್ ವಿರುದ್ಧ ಪೋನ್ನಂಪೇಟೆ ತಾಲ್ಲೂಕಿನ ಕುಟ್ಟ ಪೊಲೀಸ್ ಠಾಣೆಯಲ್ಲಿ (Kutta Police Station) ಸೆಕ್ಷನ್ 105, 211, 213 ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಕುಟ್ಟ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Ghaziabad| ಏರ್ ಇಂಡಿಯಾ ಟೇಕಾಫ್ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ
ಏನಿದು ಘಟನೆ?
ಕಳ್ಳಹಳ್ಳ ಅರಣ್ಯ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಎಂಬುವವರು ಮೇ 22 ರಂದು ಕರ್ತವ್ಯ ನಿಮಿತ್ತ ಇತರ ಸಿಬ್ಬಂದಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಜೀಪ್ ಅಪಘಾತವಾಗಿ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತೀವ್ರ ಪೆಟ್ಟಾಗಿದ್ದರಿಂದ 72 ಗಂಟೆಗಳ ಕಾಲ ಐಸಿಯುನಲ್ಲಿ ಇರಿಸಲಾಗಿತ್ತು. ನಂತರ ಮನೆಗೆ ಬಿಟ್ಟು ಹೋಗಿದ್ದರು. ಪುನಃ ಮೇ 26ರಂದು ಆಸ್ಪತ್ರೆಗೆ ತೋರಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಇದೇ ಜೂನ್ 12ರಂದು ಮನೆಯಲ್ಲೇ ಗೋಪಾಲ ಮೃತಪಟ್ಟಿದ್ದರು. ಇಲಾಖೆ ನಿಯಮದಂತೆ ವೈದ್ಯಕೀಯ ಮರಣೋತ್ತರ ಪರೀಕ್ಷೆ ನಡೆಸದೇ ಅಧಿಕಾರಿಗಳು ಅಂತಿಮ ಸಂಸ್ಕಾರ ನೆರವೇರಿಸಿದ್ದರು.
ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧವೇ ಪತ್ನಿ ದೂರು ನೀಡಿದ್ದರು. ಮೇ 22ರಂದು ಅಪಘಾತವಾಗಿದ್ದರೂ ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಘಟನೆ ಬಳಿಕ ಪತ್ನಿ, ಮಕ್ಕಳಿಗೆ ತಿಳಿಸದೇ ಇಲಾಖೆಯಿಂದಲೂ ಸೂಕ್ತ ಚಿಕಿತ್ಸೆ ದೊರಕದ ಹಿನ್ನೆಲೆ ಮೃತಟ್ಟಿದ್ದಾರೆ ಎಂದು ಕುಟ್ಟ ಪೊಲೀಸ್ ಠಾಣೆಯಲ್ಲಿ ಮೃತ ಗೋಪಾಲನ ಪತ್ನಿ ದೂರು ನೀಡಿದ್ದರು. ದೂರಿನ ಅನ್ವಯ ಜೂನ್ 14ರ ಶನಿವಾರ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ
ಮೃತ ಗೋಪಾಲನ ಮನೆಗೆ ವನ್ಯಜೀವಿ ಘಟಕದ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಂಕೇತ್ ಪೂವಯ್ಯ ಭೇಟಿ ಸಾಂತ್ವನ ಹೇಳಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: Photo Gallery | ಇಂದ್ರಯಾಣಿ ನದಿಯಲ್ಲಿ ಉಕ್ಕಿ ಹರಿದ ಪ್ರವಾಹಕ್ಕೆ ಕುಸಿದ ಸೇತುವೆ