KRS ಡ್ಯಾಂನಲ್ಲಿ 16 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳ

By
1 Min Read

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಅಬ್ಬರ ಜೋರಾಗಿರುವ ಹಿನ್ನೆಲೆ ಕೆಆರ್‌ಎಸ್ (KRS) ಆಣೆಕಟ್ಟೆಯಲ್ಲಿ ಒಳಹರಿವು ಹೆಚ್ಚಾಗಿದೆ.

ಹೌದು, ಮಂಡ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ಒಳಹರಿವು ಹೆಚ್ಚಳವಾಗಿದೆ.ಇದನ್ನೂ ಓದಿ: ಇರಾನ್‌ ಜನ ತಕ್ಷಣವೇ ಟೆಹ್ರಾನ್‌ ಖಾಲಿ ಮಾಡಿ: ಟ್ರಂಪ್‌ ಸೂಚನೆ

ಕಳೆದ ಹತ್ತು ದಿನಗಳಿಂದ ಕೆಆರ್‌ಎಸ್ ಡ್ಯಾಂಗೆ 2 ಸಾವಿರ ಕ್ಯೂಸೆಕ್ ನೀರು ಬರುತ್ತಿತ್ತು. ಸೋಮವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ ಕೆಆರ್‌ಎಸ್ ಡ್ಯಾಂಗೆ ಇಂದು 16,936 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಈ ಮೂಲಕ 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 110.95 ಅಡಿಯಷ್ಟು ಭರ್ತಿಯಾಗಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ ಕನ್ನಂಬಾಡಿ ಕಟ್ಟೆಯಲ್ಲಿ 32.686 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಇನ್ನೂ ಡ್ಯಾಂನಿAದ 915 ಕ್ಯೂಸೆಕ್ ಹೊರಹರಿವು ಇದೆ.ಇದನ್ನೂ ಓದಿ: KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

Share This Article