I’m not a journalist ಎಂದು ಹೇಳಿ ರಾಜಣ್ಣ ಪರ ಸಿಎಂ ಬ್ಯಾಟಿಂಗ್

Public TV
1 Min Read

ಬೆಂಗಳೂರು: ರಾಜಣ್ಣ (KN Rajanna) ಸೆಪ್ಟೆಂಬರ್ ಕ್ರಾಂತಿ ಹೇಳಿಕೆಗೆ ಕಾಂಗ್ರೆಸ್ (Congress) ಡಿಸ್ಟರ್ಬ್ ಆಯ್ತಾ ಎಂಬ ಚರ್ಚೆ ಜೋರಾಗಿದೆ. ರಾಜಣ್ಣ ಕ್ರಾಂತಿ ಆಗುತ್ತದೆ ಎಂದು ಹೇಳಿದ ಬಳಿಕ ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ತೇಪೆ ಹಚ್ಚಲು‌ ಮುಂದಾಗಿದ್ದಾರೆ. ಆಪ್ತನ ಕ್ರಾಂತಿ ಏಟು ಸಿಎಂಗೆ ಮತ್ತೆ ‌ಫಜೀತಿ ತಂದಿದ್ದು ಸಮರ್ಥಿಸಿಕೊಳ್ಳುವ ನೆಪದಲ್ಲಿ ಮಾಧ್ಯಮಗಳತ್ತ ಬೊಟ್ಟು ಮಾಡಿದ್ದಾರೆ. ‌

ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ.ಎನ್ ರಾಜಣ್ಣ (KN Rajanna) ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ, ಬದಲಾವಣೆ ಆಗುತ್ತದೆ ಎಂದು ಹೇಳಿದ್ದಾರೆ. ಇಂತಹದ್ದೇ ಬದಲಾವಣೆ ಎಂದು ಹೇಳಿಲ್ಲ. ಸಣ್ಣಪುಟ್ಟ ಬದಲಾವಣೆ ಆಗುತ್ತದೆ ಎಂದು ಹೇಳಿದ್ದಾರೆ ಅಷ್ಟೇ. ಅದನ್ನ ನೀವು ಹೇಗೆ ಬೇಕೋ ಹಾಗೆ ಬರೆದುಕೊಂಡರೆ ಹೇಗೆ? ಆಮ್ ನಾಟ್ ಎ ಜರ್ನಲಿಸ್ಟ್ ಎಂದರು. ಇದನ್ನೂ ಓದಿ: ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಭಾರೀ ರಾಜಕೀಯ ಬದಲಾವಣೆ: ರಾಜಣ್ಣ ಬಾಂಬ್‌

 

ಸುರ್ಜೇವಾಲಾ ಬೆಂಗಳೂರಿಗೆ ಬರುತ್ತಿರುವುದು ಹೌದು. ಹಾಗಂತ ಪಕ್ಷದಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಬರ್ತಿದಾರೆ ಅಂದ್ರೆ ಹೇಗೆ? ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ಇದೆ ಅಂತಾ ನಿಮಗೆ ಯಾರು ಹೇಳಿದ್ದು ಎಂದು ಪ್ರಶ್ನಿಸುವ ಮೂಲಕ ಮಾಧ್ಯಮಗಳ ವಿರುದ್ಧವೇ ಸಿಎಂ ಸಿದ್ದರಾಮಯ್ಯ ಗರಂ ಆದರು. ಇದನ್ನೂ ಓದಿ: ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು – ಬೆಚ್ಚಿಬಿದ್ದ ಭಕ್ತರು

ಇನ್ನೊಂದೆಡೆ ರಾಜಣ್ಣ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದು, ಕಾಂಗ್ರೆಸ್‌ನಲ್ಲಿ ನಡೆಯುತ್ತಿರೋ ಕ್ರಾಂತಿಯೋ, ಯಾವುದೋ ಗೊತ್ತಿಲ್ಲ. ಅದನ್ನು ರಾಜಣ್ಣ ಅಥವಾ ಸಿಎಂ ಅವರೇ ಹೇಳಬೇಕು. ಇದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅವರ ಪಕ್ಷದ ಬೆಳವಣಿಗೆ ನನಗೆ ಹೇಗೆ ಗೊತ್ತಾಗಲಿದೆ ಎಂದು ಪ್ರಶ್ನಿಸಿದರು.

Share This Article