ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಿಎಂ ಸೂಚನೆ

Public TV
2 Min Read

ಬೆಂಗಳೂರು: ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೇಡಿಸುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚನೆ ಕೊಟ್ಟಿದ್ದಾರೆ.

ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸಿಎಂ, ಕೇಸ್‌ ದಾಖಲಿಸಬೇಕು ಅಥವಾ ಯಾರಾದ್ರು ದ್ವೇಷ ಭಾಷಣ ಮಾಡಿರುವವರ ವಿರುದ್ಧ ದೂರು ಕೊಟ್ಟರೂ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಖಡಕ್‌ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಸರಿಯಾದ ಕ್ರಮ ಜರುಗಿಸದಕ್ಕೆ ಸಿಎಂ, ಪರಂ ಅಸಮಾಧಾನ

ನೀವು ಕ್ರಮ‌ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ ಕೆಲಸ ಮಾಡಬೇಕೆಂದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್

ತೆಲಂಗಾಣ ಮಾದರಿಯ ಟೋಪಿಗೆ ಸಿಎಂ ಅನುಮತಿ
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಹೊಸ ಮಾದರಿಯ ಟೋಪಿಗೆ ಸಮ್ಮತಿ ಸೂಚಿಸಿದ್ದಾರೆ. ಐದಾರು ರಾಜ್ಯದ ಟೋಪಿಗಳನ್ನು ಪರಿಶೀಲನೆ ಮಾಡಿದ ಸಿಎಂ ತೆಲಂಗಾಣ ರಾಜ್ಯದ ಟೋಪಿಯನ್ನು ಆಯ್ಕೆ ಮಾಡಿದ್ದಾರೆ. ತೆಲಂಗಾಣ ರಾಜ್ಯದ ಟೋಪಿಯನ್ನ ಹೆಡ್‌ಕಾನ್ಸ್ಟೇಬಲ್‌ಗೆ ಹಾಕಿಸಿ, ಪರಿಶೀಲನೆ ಮಾಡಿ ಅಂತಿಮಗೊಳಿಸಿದ್ದಾರೆ. ಇದನ್ನೂ ಓದಿ: ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

ಕಳೆದ ಅಧಿವೇಶನದಲ್ಲಿ ಶಾಸಕ ಸಿ.ಎನ್ ಮಂಜೇಗೌಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಒಂದೇ ರೀತಿಯ ಟೋಪಿ ನೀಡಬೇಕೆಂದು ಪ್ರಶ್ನೆ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಡಾ.ಪರಮೇಶ್ವರ್ ಅಂದಿನ ಡಿಜಿಐಜಿಪಿ ಅಲೋಕ್ ಮೋಹನ್‌ಗೆ ಸೂಚಿಸಿದ್ದರು. ಕೆಎಸ್‌ಆರ್‌ಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಟೋಪಿ ಬದಲಾವಣೆ ಕುರಿತು ಸಿವಿಲ್, ಕೆಎಸ್‌ಆರ್‌ಪಿ, ಸಿಎಆರ್, ಡಿಎಆರ್, ಹಾಗೂ ಐಎಸ್‌ಡಿ ಸೇರಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳ ಹೆಡ್‌ಕಾನ್ಸಟೇಬಲ್ ಹಾಗೂ ಕಾನ್ಸಟೇಬಲ್‌ಗಳಿಂದ ಸಮಿತಿ ಅಭಿಪ್ರಾಯ ಸಂಗ್ರಹಿಸಿತ್ತು, ಅಲ್ಲದೆ ಕೇರಳ, ಮಹಾರಾಷ್ಟ್ರ, ಆಂದ್ರಪ್ರದೇಶ, ತಮಿಳುನಾಡು ಸೇರಿ ಹೊರ ರಾಜ್ಯದ ಪೊಲೀಸರ ಟೋಪಿ ಕುರಿತು ಮಾಹಿತಿ ಕಲೆ ಹಾಕಲಾಗಿತ್ತು.

ಈ ಎಲ್ಲಾ ಅಭಿಪ್ರಾಯ ಬಳಿಕ ಮೂರು ಬಾರಿ ಸಭೆ ಸೇರಿ, ಸಮಾಲೋಚನೆ ನಡೆಸಿ ಅಂತಿಮವಾಗಿ ತೆಲಂಗಾಣ ರಾಜ್ಯದ ಟೋಪಿಯನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ.

Share This Article