ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

By
1 Min Read

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು (Draupadi Murmu)`ಮುರ್ಮಾಜೀ’ ಎಂದು ಉಚ್ಛರಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಪಮಾನ ಮಾಡಿದ್ದಾರೆ.

- Advertisement -

ಛತ್ತೀಸ್‌ಘಡದ ರಾಯಪುರ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಮುರ್ಮು ಅವರನ್ನು `ಮುರ್ಮಾಜೀ’ ಎಂದು ತಪ್ಪಾಗಿ ಉಚ್ಛರಿಸಿದ್ದಾರೆ. ತಕ್ಷಣವೇ ಎಚ್ಚೆತ್ತು ತಿದ್ದಿಕೊಂಡಿದ್ದಾರೆ. ನಂತರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು `ಕೋವಿಡ್’ ಅಂತಲೂ ತಪ್ಪಾಗಿ ಉಚ್ಛರಿಸಿದ್ದಾರೆ. ಛತ್ತೀಸ್‌ಗಡದಲ್ಲಿ ದೊಡ್ಡಪ್ರಮಾಣದಲ್ಲಿ ಅರಣ್ಯನಾಶ ಮಾಡಲಾಗ್ತಿದೆ. ಬಿಜೆಪಿಗರು ದೊಡ್ಡ ಉದ್ದಿಮೆದಾರರ ಸ್ನೇಹಿತರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ನರ್ಸ್‌ಗೆ ಜು.16ಕ್ಕೆ ನೇಣು

- Advertisement -

- Advertisement -

ನೆಲ-ಜಲ-ಅರಣ್ಯ ಸಂರಕ್ಷಣೆ ನಮ್ಮ ಹೊಣೆ. ಮುರ್ಮಾಜೀ, ಕೋವಿಡ್‌ರನ್ನು ನಾವು ರಾಷ್ಟ್ರಪತಿ ಮಾಡಿದ್ದೇವೆ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು. ಯಾಕೆಂದರೆ, ನಮ್ಮ ನೆಲ-ಜಲ-ಅರಣ್ಯ, ಸಂಪನ್ಮೂಲಗಳನ್ನು ಲೂಟಿ ಮಾಡಲು. ಅದಾನಿ, ಅಂಬಾನಿ ಅಂತವರು ಇವತ್ತು ಇದನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ.

- Advertisement -

ಖರ್ಗೆ ಹೇಳಿಕೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಮುರ್ಮು ಅವರ ವಿರುದ್ಧ ಖರ್ಗೆ ಅಗೌರವ, ಆಕ್ಷೇಪಾರ್ಹ ಪದ ಬಳಸಿದ್ದಾರೆ. ದೇಶದ ಇಡೀ ಬುಡಕಟ್ಟು ಸಮುದಾಯ ಇದನ್ನು ಖಂಡಿಸುತ್ತೆ. ಇದು ಎಸ್‌ಸಿ/ಎಸ್‌ಟಿ ವಿರೋಧಿ ಕಾಂಗ್ರೆಸ್ ಮನಸ್ಥಿತಿ ತೋರಿಸುತ್ತೆ ಎಂದು ಬಿಜೆಪಿ ತೀವ್ರವಾಗಿ ಖಂಡಿಸಿದೆ.ಇದನ್ನೂ ಓದಿ: ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

Share This Article