11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
1 Min Read

ಯಾದಗಿರಿ: 11 ಲಕ್ಷ ರೂ. ಮೌಲ್ಯದ ಚಿನ್ನ ಕದ್ದು ಪರಾರಿಯಾಗಿದ್ದ ಕುಖ್ಯಾತ ಮನೆಗಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮೂಲದ ಸಂತೋಷ್ (43) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

ಗೋಗಿ ಹಾಗೂ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ನಾಲ್ಕು ಮನೆಗಳಲ್ಲಿ ಕಳ್ಳತನ ನಡೆದಿತ್ತು. ನಾಲ್ಕು ಪ್ರಕರಣಗಳಲ್ಲಿ ಈ ಕುಖ್ಯಾತ ಕಳ್ಳನ ಕೈವಾಡವಿತ್ತು. ಈ ಕುರಿತು ಗೋಗಿ ಹಾಗೂ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಗೋಗಿ ಪೊಲೀಸರು ಈತನನ್ನು ಬಂಧಿಸಿದ್ದು, 11 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನ ಹಾಗೂ 4 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Share This Article