ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

Public TV
1 Min Read

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ನಿವೃತ್ತ ನ್ಯಾ.ಕುನ್ಹಾ ಆಯೋಗದ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ (State Govt) ಹೈಕೋರ್ಟ್ (High Court) ಸೂಚನೆ ನೀಡಿದೆ.

ನಿವೃತ್ತ ನ್ಯಾ. ಕುನ್ಹಾ ಆಯೋಗದ ವರದಿ ಪ್ರಶ್ನಿಸಿ ಡಿಎನ್‌ಎ ಮ್ಯಾನೇಜ್ಮೆಂಟ್ (DNA Management) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳವಾರ (ಆ.5) ಹೈಕೋರ್ಟ್ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್, ನಿವೃತ್ತ ನ್ಯಾ.ಕುನ್ಹಾ ಆಯೋಗದ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಇದನ್ನೂ ಓದಿ: ಪರಮೇಶ್ವರ್ ಪರ ಆಂಧ್ರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಮುಂದಿನ ಸಿಎಂ ಘೋಷಣೆ

ಡಿಎನ್‌ಎ ಪರವಾಗಿ ಹಿರಿಯ ವಕೀಲ ಸಂಪತ್ ಕುಮಾರ್ ವಾದ ಮಂಡಿಸಿ, ನ್ಯಾ.ಕುನ್ಹಾ ವರದಿ ಸಲ್ಲಿಕೆ ಹಾಗೂ ಕಾಲ್ತುಳಿತ ಘಟನೆಯ ಬಗ್ಗೆ ಪೀಠಕ್ಕೆ ವಿವರಣೆ ನೀಡಿದರು. ಇದೇ ವೇಳೆ ಕುನ್ಹಾ ಆಯೋಗಕ್ಕೆ ವಿಚಾರಣಾ ವ್ಯಾಪ್ತಿ ನಿಗದಿಗೊಳಿಸಿರಲಿಲ್ಲ. ನಮಗೆ ನ್ಯಾ.ಕುನ್ಹಾ ವರದಿ ಸಿಕ್ಕಿಲ್ಲ. ಹೀಗಾಗಿ ಮಾಧ್ಯಮಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ. ನಮ್ಮ ಎರಡು ಮೆಮೊಗಳಿಗೆ (ಜ್ಞಾಪಕ ಪತ್ರ) ನ್ಯಾ.ಕುನ್ಹಾ ಅವರು ಪ್ರತಿಕ್ರಿಯಿಸಿಲ್ಲ. ಮಾಧ್ಯಮಗಳ ವರದಿಯಿಂದ ಇದೆಲ್ಲಾ ಸಿಕ್ಕಿದೆ. ಮಾಹಿತಿ ಹಕ್ಕು ಕಾಯಿದೆ ಅಡಿಯೂ ಅರ್ಜಿ ಸಲ್ಲಿಸಿದ್ದೇವೆ. ಇದುವರೆಗೂ ವರದಿ ಸಿಕ್ಕಿಲ್ಲ ಎಂದು ವಾದಿಸಿದರು.

ಈ ವೇಳೆ ಅಡ್ವಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ನಮ್ಮ ಆಕ್ಷೇಪವಿಲ್ಲ. ಆದರೆ ಅರ್ಜಿದಾರರಿಗೆ ನೀಡಲ್ಲ ಎಂದು ವಾದ ಮಂಡಿಸಿದರು. ಬಳಿಕ ಹೈಕೋರ್ಟ್ ವಿಚಾರಣೆಯನ್ನು ಆ.7ಕ್ಕೆ ಮುಂದೂಡಿದೆ.

2025ರ ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಗೆಲುವು ಸಾಧಿಸಿತ್ತು. ಈ ಹಿನ್ನೆಲೆ ಜೂ.4ರಂದು ಆರ್‌ಸಿಬಿಯ ತವರು ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನೂಕುನುಗ್ಗಲು ಉಂಟಾಗಿ 11 ಜನ ಸಾವನ್ನಪ್ಪಿದ್ದರು. 30ಕ್ಕೂ ಅಧಿಕ ಜನ ಗಾಯಗೊಂಡಿದ್ದರು.ಇದನ್ನೂ ಓದಿ: ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?

Share This Article